Advertisement
MIRROR FOCUS

ವಯನಾಡು ಭೀಕರ ದುರಂತ | ಭೂಕುಸಿತದಿಂದ ತಪ್ಪಿಸಿಕೊಂಡವರನ್ನು ಕಾಡಿನಲ್ಲಿ ಕಾಪಾಡಿದ ಕಾಡಾನೆ

Share

ಕೇರಳದ ವಯನಾಡಿನಲ್ಲಿನಡೆದ ದುರಂತ ನಿಜಕ್ಕೂ ಇಡೀ ಮನಕುಲವನ್ನೇ ಬೆಚ್ಚಿ ಬೀಳಿಸುವಂತದ್ದು. ಯಾರೂ, ಎಲ್ಲಿ, ಯಾವಾಗ ಏನಾಯ್ತು ಅನ್ನೋದನ್ನು ತಿಳಿಯುವಷ್ಟರಲ್ಲಿ ಎಲ್ಲವೂ ಮಣ್ಣು ಪಾಲಾಗಿತ್ತು. ಇಂತಹ ದುರಂತದ ನಡುವೆಯೂ ಕುಟುಂಬವೊಂದು ತಪ್ಪಿಸಿಕೊಂಡು ದೀಪದ ಬೆಳಕಿನಲ್ಲಿ ಗುಡ್ಡ ಹತ್ತಿದೆ. ಅಲ್ಲಿ ಹೋದರೆ ಬೆಂಕಿಯಿಂದ ತಪ್ಪಿಸಿಕೊಂಡು ಬಂದವರಿಗೆ ಬಾಣಲೆಗೆ ಬಿದ್ದ ಪರಿಸ್ಥಿತಿ ಎದುರಾಗಿದೆ. ಆದರೆ ಅವರನ್ನು ಕೈ ಹಿಡಿದು ಕಾಪಾಡಿದ್ದು ಅದೇ.

ಸಂಕಷ್ಟದಲ್ಲಿದ್ದ ಸಂತ್ರಸ್ತರಿಗೆ ಆ ಕರಾಳ ರಾತ್ರಿ ಬೆಟ್ಟದಲ್ಲಿ ಎದುರಾಗಿದ್ದು ಒಂದು ದೈತ್ಯ ಕಾಡಾನೆ. ಆದರೆ ಅವರನ್ನು ಕಾಪಾಡಿ ಅವರಿಗೆ ಬೆಳಗಾಗುವ ತನಕ ಕಾವಾಲಾಗಿ ನಿಂತಿದ್ದು ಇದೇ ಗಜರಾಜ. ಸಾವಿನ ದವಡೆಯಿಂದ ಪಾರಾಗಿ ಬಂದ ವೃದ್ಧೆ ಸುಜಾತ ಈ ಕುರಿತು ಸ್ಥಳೀಯರೊಬ್ಬರಿಗೆ ಮಾಹಿತಿ ಕೊಟ್ಟಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗುತ್ತಿದೆ. ಏಶಿಯಾನೆಟ್‌ ನ್ಯೂಸ್‌ ಸಹಿತ ಕೇರಳದ ವಿವಿಧ ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿವೆ.ಮಹಿಳೆಯ ಜೊತೆ ಮಾತನಾಡಿದ್ದಾರೆ. ಅವರು ಹೇಳಿದ್ದು ಹೀಗೆ….

ರಾತ್ರಿ  ಭಾರೀ ಮಳೆಯಾಗುತ್ತಿದ್ದರಿಂದ, ಮಧ್ಯರಾತ್ರಿ 1:15ಕ್ಕೆ ಎಚ್ಚರವಾಯಿತು. ದೊಡ್ಡ ಶಬ್ದ ಕೇಳಿಸಿದ ಬೆನ್ನಲ್ಲೇ ನಮ್ಮ ಮನೆಗೆ ನೀರು ನುಗ್ಗಿತು. ನಾವೆಲ್ಲರೂ ಹಾಸಿಗೆಯ ಮೇಲೆ ಕುಳಿತೆವು. ಆಗ ನಮ್ಮ ನೆರೆಹೊರೆಯವರ ಮನೆಗಳ ಅವಶೇಷಗಳ ಜೊತೆಗೆ ದೊಡ್ಡ ಮರದ ದಿಮ್ಮಿಗಳು ಮನೆಯ ಮೇಲೆ ಬಡಿಯುತ್ತಿದ್ದವು. ನಮ್ಮ ಮನೆಯ ಮೇಲ್ಛಾವಣಿ ನಮ್ಮ ಮೇಲೆ ಕುಸಿದು ಬಿದ್ದಿದ್ದು, ನನ್ನ ಮಗಳು ಗಂಭೀರವಾಗಿ ಗಾಯಗೊಂಡಿದ್ದಳು. ಗುಡ್ಡ ಜರಿದು ಮನೆ ಉರುಳಿ ಬಿದ್ದಾಗ ಮನೆಯ ಚಿಮಿಣಿಯಲ್ಲಿ ಸ್ವಲ್ಪ ಜಾಗ ಕಾಣಿಸಿತು. ನಾನು ಇಟ್ಟಿಗೆ ರಾಶಿಯನ್ನು ಸರಿಸಿ ಜಾಗ ಮಾಡಿಕೊಂಡು ಮಗಳು, ಮೊಮ್ಮಗಳು, ಅಳಿಯ ಎಲ್ಲರೂ ಹೊರ ಬಂದು ಬೆಟ್ಟದ ಬಳಿ ಓಡಿದೆವು.
ಹೇಗೋ ಒದ್ದಾಡಿ ಬೆಟ್ಟದ ಬಳಿಗೆ ಬಂದಾಗ ಅಲ್ಲಿ ದೊಡ್ಡ ಕಾಡಾನೆ ನಿಂತಿತ್ತು. ಆಗ ಆನೆ ಬಳಿ ನಿಂತು ಪ್ರಾರ್ಥನೆ ಮಾಡಿದೆವು. ಒಂದು ದೊಡ್ಡ ದುರಂತದಿಂದ ತಪ್ಪಿಸಿಕೊಂಡು ಬಂದಿದ್ದೇವೆ. ನೀನು ನಮಗೇನೂ ಮಾಡಬೇಡಪ್ಪಾ ಎಂದು ನಾನು ಆನೆಯ ಮುಂದೆ ನಿಂತು ಕಣ್ಣೀರು ಹಾಕಿದೆ. ಆನೆಯ ಕಣ್ಣಿನಿಂದಲೂ ನೀರು ಬಂತು. ರಾತ್ರಿ ಬೆಳಗಾಗುವವರೆಗೆ ನಾವು ಆನೆಯ ಕಾಲಿನ ಹತ್ತಿರವೇ ಸಮಯ ಕಳೆದೆವು. ರಾತ್ರಿ ಪೂರ್ತಿ ಮಳೆ, ಸರಿಯಾಗಿ ನಿಂತುಕೊಳ್ಳಲೂ ಸಾಧ್ಯವಾಗುತ್ತಿರಲಿಲ್ಲ. ಬೆಳಗ್ಗೆ 6 ಗಂಟೆಯಾದಾಗ ಎಲ್ಲಿಂದಲೋ ಜನರು ಬಂದರು. ನಮ್ಮನ್ನು ಕಾಪಾಡಲು ನಮ್ಮ ಊರಿನವರು ಯಾರೂ ಬದುಕುಳಿದಿರಲಿಲ್ಲ. ಆಮೇಲೆ ದೂರದೂರಿನಿಂದ ಬಂದ ಜನರು ನಮ್ಮನ್ನು ಕಾಪಾಡಿ ಸುರಕ್ಷಿತ ಜಾಗಕ್ಕೆ ತಲುಪಿಸಿದರು ಎಂದು ಸುಜಾತ  ತಿಳಿಸಿದರು.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

7 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

8 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

9 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

11 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

23 hours ago