Advertisement
MIRROR FOCUS

ವಯನಾಡು ಭೀಕರ ದುರಂತ | ಭೂಕುಸಿತದಿಂದ ತಪ್ಪಿಸಿಕೊಂಡವರನ್ನು ಕಾಡಿನಲ್ಲಿ ಕಾಪಾಡಿದ ಕಾಡಾನೆ

Share

ಕೇರಳದ ವಯನಾಡಿನಲ್ಲಿನಡೆದ ದುರಂತ ನಿಜಕ್ಕೂ ಇಡೀ ಮನಕುಲವನ್ನೇ ಬೆಚ್ಚಿ ಬೀಳಿಸುವಂತದ್ದು. ಯಾರೂ, ಎಲ್ಲಿ, ಯಾವಾಗ ಏನಾಯ್ತು ಅನ್ನೋದನ್ನು ತಿಳಿಯುವಷ್ಟರಲ್ಲಿ ಎಲ್ಲವೂ ಮಣ್ಣು ಪಾಲಾಗಿತ್ತು. ಇಂತಹ ದುರಂತದ ನಡುವೆಯೂ ಕುಟುಂಬವೊಂದು ತಪ್ಪಿಸಿಕೊಂಡು ದೀಪದ ಬೆಳಕಿನಲ್ಲಿ ಗುಡ್ಡ ಹತ್ತಿದೆ. ಅಲ್ಲಿ ಹೋದರೆ ಬೆಂಕಿಯಿಂದ ತಪ್ಪಿಸಿಕೊಂಡು ಬಂದವರಿಗೆ ಬಾಣಲೆಗೆ ಬಿದ್ದ ಪರಿಸ್ಥಿತಿ ಎದುರಾಗಿದೆ. ಆದರೆ ಅವರನ್ನು ಕೈ ಹಿಡಿದು ಕಾಪಾಡಿದ್ದು ಅದೇ.

ಸಂಕಷ್ಟದಲ್ಲಿದ್ದ ಸಂತ್ರಸ್ತರಿಗೆ ಆ ಕರಾಳ ರಾತ್ರಿ ಬೆಟ್ಟದಲ್ಲಿ ಎದುರಾಗಿದ್ದು ಒಂದು ದೈತ್ಯ ಕಾಡಾನೆ. ಆದರೆ ಅವರನ್ನು ಕಾಪಾಡಿ ಅವರಿಗೆ ಬೆಳಗಾಗುವ ತನಕ ಕಾವಾಲಾಗಿ ನಿಂತಿದ್ದು ಇದೇ ಗಜರಾಜ. ಸಾವಿನ ದವಡೆಯಿಂದ ಪಾರಾಗಿ ಬಂದ ವೃದ್ಧೆ ಸುಜಾತ ಈ ಕುರಿತು ಸ್ಥಳೀಯರೊಬ್ಬರಿಗೆ ಮಾಹಿತಿ ಕೊಟ್ಟಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗುತ್ತಿದೆ. ಏಶಿಯಾನೆಟ್‌ ನ್ಯೂಸ್‌ ಸಹಿತ ಕೇರಳದ ವಿವಿಧ ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿವೆ.ಮಹಿಳೆಯ ಜೊತೆ ಮಾತನಾಡಿದ್ದಾರೆ. ಅವರು ಹೇಳಿದ್ದು ಹೀಗೆ….

ರಾತ್ರಿ  ಭಾರೀ ಮಳೆಯಾಗುತ್ತಿದ್ದರಿಂದ, ಮಧ್ಯರಾತ್ರಿ 1:15ಕ್ಕೆ ಎಚ್ಚರವಾಯಿತು. ದೊಡ್ಡ ಶಬ್ದ ಕೇಳಿಸಿದ ಬೆನ್ನಲ್ಲೇ ನಮ್ಮ ಮನೆಗೆ ನೀರು ನುಗ್ಗಿತು. ನಾವೆಲ್ಲರೂ ಹಾಸಿಗೆಯ ಮೇಲೆ ಕುಳಿತೆವು. ಆಗ ನಮ್ಮ ನೆರೆಹೊರೆಯವರ ಮನೆಗಳ ಅವಶೇಷಗಳ ಜೊತೆಗೆ ದೊಡ್ಡ ಮರದ ದಿಮ್ಮಿಗಳು ಮನೆಯ ಮೇಲೆ ಬಡಿಯುತ್ತಿದ್ದವು. ನಮ್ಮ ಮನೆಯ ಮೇಲ್ಛಾವಣಿ ನಮ್ಮ ಮೇಲೆ ಕುಸಿದು ಬಿದ್ದಿದ್ದು, ನನ್ನ ಮಗಳು ಗಂಭೀರವಾಗಿ ಗಾಯಗೊಂಡಿದ್ದಳು. ಗುಡ್ಡ ಜರಿದು ಮನೆ ಉರುಳಿ ಬಿದ್ದಾಗ ಮನೆಯ ಚಿಮಿಣಿಯಲ್ಲಿ ಸ್ವಲ್ಪ ಜಾಗ ಕಾಣಿಸಿತು. ನಾನು ಇಟ್ಟಿಗೆ ರಾಶಿಯನ್ನು ಸರಿಸಿ ಜಾಗ ಮಾಡಿಕೊಂಡು ಮಗಳು, ಮೊಮ್ಮಗಳು, ಅಳಿಯ ಎಲ್ಲರೂ ಹೊರ ಬಂದು ಬೆಟ್ಟದ ಬಳಿ ಓಡಿದೆವು.
ಹೇಗೋ ಒದ್ದಾಡಿ ಬೆಟ್ಟದ ಬಳಿಗೆ ಬಂದಾಗ ಅಲ್ಲಿ ದೊಡ್ಡ ಕಾಡಾನೆ ನಿಂತಿತ್ತು. ಆಗ ಆನೆ ಬಳಿ ನಿಂತು ಪ್ರಾರ್ಥನೆ ಮಾಡಿದೆವು. ಒಂದು ದೊಡ್ಡ ದುರಂತದಿಂದ ತಪ್ಪಿಸಿಕೊಂಡು ಬಂದಿದ್ದೇವೆ. ನೀನು ನಮಗೇನೂ ಮಾಡಬೇಡಪ್ಪಾ ಎಂದು ನಾನು ಆನೆಯ ಮುಂದೆ ನಿಂತು ಕಣ್ಣೀರು ಹಾಕಿದೆ. ಆನೆಯ ಕಣ್ಣಿನಿಂದಲೂ ನೀರು ಬಂತು. ರಾತ್ರಿ ಬೆಳಗಾಗುವವರೆಗೆ ನಾವು ಆನೆಯ ಕಾಲಿನ ಹತ್ತಿರವೇ ಸಮಯ ಕಳೆದೆವು. ರಾತ್ರಿ ಪೂರ್ತಿ ಮಳೆ, ಸರಿಯಾಗಿ ನಿಂತುಕೊಳ್ಳಲೂ ಸಾಧ್ಯವಾಗುತ್ತಿರಲಿಲ್ಲ. ಬೆಳಗ್ಗೆ 6 ಗಂಟೆಯಾದಾಗ ಎಲ್ಲಿಂದಲೋ ಜನರು ಬಂದರು. ನಮ್ಮನ್ನು ಕಾಪಾಡಲು ನಮ್ಮ ಊರಿನವರು ಯಾರೂ ಬದುಕುಳಿದಿರಲಿಲ್ಲ. ಆಮೇಲೆ ದೂರದೂರಿನಿಂದ ಬಂದ ಜನರು ನಮ್ಮನ್ನು ಕಾಪಾಡಿ ಸುರಕ್ಷಿತ ಜಾಗಕ್ಕೆ ತಲುಪಿಸಿದರು ಎಂದು ಸುಜಾತ  ತಿಳಿಸಿದರು.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

10 minutes ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

45 minutes ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

2 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

3 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

15 hours ago