Advertisement
MIRROR FOCUS

ವಯನಾಡು ಭೀಕರ ದುರಂತ | ಭೂಕುಸಿತದಿಂದ ತಪ್ಪಿಸಿಕೊಂಡವರನ್ನು ಕಾಡಿನಲ್ಲಿ ಕಾಪಾಡಿದ ಕಾಡಾನೆ

Share

ಕೇರಳದ ವಯನಾಡಿನಲ್ಲಿನಡೆದ ದುರಂತ ನಿಜಕ್ಕೂ ಇಡೀ ಮನಕುಲವನ್ನೇ ಬೆಚ್ಚಿ ಬೀಳಿಸುವಂತದ್ದು. ಯಾರೂ, ಎಲ್ಲಿ, ಯಾವಾಗ ಏನಾಯ್ತು ಅನ್ನೋದನ್ನು ತಿಳಿಯುವಷ್ಟರಲ್ಲಿ ಎಲ್ಲವೂ ಮಣ್ಣು ಪಾಲಾಗಿತ್ತು. ಇಂತಹ ದುರಂತದ ನಡುವೆಯೂ ಕುಟುಂಬವೊಂದು ತಪ್ಪಿಸಿಕೊಂಡು ದೀಪದ ಬೆಳಕಿನಲ್ಲಿ ಗುಡ್ಡ ಹತ್ತಿದೆ. ಅಲ್ಲಿ ಹೋದರೆ ಬೆಂಕಿಯಿಂದ ತಪ್ಪಿಸಿಕೊಂಡು ಬಂದವರಿಗೆ ಬಾಣಲೆಗೆ ಬಿದ್ದ ಪರಿಸ್ಥಿತಿ ಎದುರಾಗಿದೆ. ಆದರೆ ಅವರನ್ನು ಕೈ ಹಿಡಿದು ಕಾಪಾಡಿದ್ದು ಅದೇ.

ಸಂಕಷ್ಟದಲ್ಲಿದ್ದ ಸಂತ್ರಸ್ತರಿಗೆ ಆ ಕರಾಳ ರಾತ್ರಿ ಬೆಟ್ಟದಲ್ಲಿ ಎದುರಾಗಿದ್ದು ಒಂದು ದೈತ್ಯ ಕಾಡಾನೆ. ಆದರೆ ಅವರನ್ನು ಕಾಪಾಡಿ ಅವರಿಗೆ ಬೆಳಗಾಗುವ ತನಕ ಕಾವಾಲಾಗಿ ನಿಂತಿದ್ದು ಇದೇ ಗಜರಾಜ. ಸಾವಿನ ದವಡೆಯಿಂದ ಪಾರಾಗಿ ಬಂದ ವೃದ್ಧೆ ಸುಜಾತ ಈ ಕುರಿತು ಸ್ಥಳೀಯರೊಬ್ಬರಿಗೆ ಮಾಹಿತಿ ಕೊಟ್ಟಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗುತ್ತಿದೆ. ಏಶಿಯಾನೆಟ್‌ ನ್ಯೂಸ್‌ ಸಹಿತ ಕೇರಳದ ವಿವಿಧ ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿವೆ.ಮಹಿಳೆಯ ಜೊತೆ ಮಾತನಾಡಿದ್ದಾರೆ. ಅವರು ಹೇಳಿದ್ದು ಹೀಗೆ….

ರಾತ್ರಿ  ಭಾರೀ ಮಳೆಯಾಗುತ್ತಿದ್ದರಿಂದ, ಮಧ್ಯರಾತ್ರಿ 1:15ಕ್ಕೆ ಎಚ್ಚರವಾಯಿತು. ದೊಡ್ಡ ಶಬ್ದ ಕೇಳಿಸಿದ ಬೆನ್ನಲ್ಲೇ ನಮ್ಮ ಮನೆಗೆ ನೀರು ನುಗ್ಗಿತು. ನಾವೆಲ್ಲರೂ ಹಾಸಿಗೆಯ ಮೇಲೆ ಕುಳಿತೆವು. ಆಗ ನಮ್ಮ ನೆರೆಹೊರೆಯವರ ಮನೆಗಳ ಅವಶೇಷಗಳ ಜೊತೆಗೆ ದೊಡ್ಡ ಮರದ ದಿಮ್ಮಿಗಳು ಮನೆಯ ಮೇಲೆ ಬಡಿಯುತ್ತಿದ್ದವು. ನಮ್ಮ ಮನೆಯ ಮೇಲ್ಛಾವಣಿ ನಮ್ಮ ಮೇಲೆ ಕುಸಿದು ಬಿದ್ದಿದ್ದು, ನನ್ನ ಮಗಳು ಗಂಭೀರವಾಗಿ ಗಾಯಗೊಂಡಿದ್ದಳು. ಗುಡ್ಡ ಜರಿದು ಮನೆ ಉರುಳಿ ಬಿದ್ದಾಗ ಮನೆಯ ಚಿಮಿಣಿಯಲ್ಲಿ ಸ್ವಲ್ಪ ಜಾಗ ಕಾಣಿಸಿತು. ನಾನು ಇಟ್ಟಿಗೆ ರಾಶಿಯನ್ನು ಸರಿಸಿ ಜಾಗ ಮಾಡಿಕೊಂಡು ಮಗಳು, ಮೊಮ್ಮಗಳು, ಅಳಿಯ ಎಲ್ಲರೂ ಹೊರ ಬಂದು ಬೆಟ್ಟದ ಬಳಿ ಓಡಿದೆವು.
ಹೇಗೋ ಒದ್ದಾಡಿ ಬೆಟ್ಟದ ಬಳಿಗೆ ಬಂದಾಗ ಅಲ್ಲಿ ದೊಡ್ಡ ಕಾಡಾನೆ ನಿಂತಿತ್ತು. ಆಗ ಆನೆ ಬಳಿ ನಿಂತು ಪ್ರಾರ್ಥನೆ ಮಾಡಿದೆವು. ಒಂದು ದೊಡ್ಡ ದುರಂತದಿಂದ ತಪ್ಪಿಸಿಕೊಂಡು ಬಂದಿದ್ದೇವೆ. ನೀನು ನಮಗೇನೂ ಮಾಡಬೇಡಪ್ಪಾ ಎಂದು ನಾನು ಆನೆಯ ಮುಂದೆ ನಿಂತು ಕಣ್ಣೀರು ಹಾಕಿದೆ. ಆನೆಯ ಕಣ್ಣಿನಿಂದಲೂ ನೀರು ಬಂತು. ರಾತ್ರಿ ಬೆಳಗಾಗುವವರೆಗೆ ನಾವು ಆನೆಯ ಕಾಲಿನ ಹತ್ತಿರವೇ ಸಮಯ ಕಳೆದೆವು. ರಾತ್ರಿ ಪೂರ್ತಿ ಮಳೆ, ಸರಿಯಾಗಿ ನಿಂತುಕೊಳ್ಳಲೂ ಸಾಧ್ಯವಾಗುತ್ತಿರಲಿಲ್ಲ. ಬೆಳಗ್ಗೆ 6 ಗಂಟೆಯಾದಾಗ ಎಲ್ಲಿಂದಲೋ ಜನರು ಬಂದರು. ನಮ್ಮನ್ನು ಕಾಪಾಡಲು ನಮ್ಮ ಊರಿನವರು ಯಾರೂ ಬದುಕುಳಿದಿರಲಿಲ್ಲ. ಆಮೇಲೆ ದೂರದೂರಿನಿಂದ ಬಂದ ಜನರು ನಮ್ಮನ್ನು ಕಾಪಾಡಿ ಸುರಕ್ಷಿತ ಜಾಗಕ್ಕೆ ತಲುಪಿಸಿದರು ಎಂದು ಸುಜಾತ  ತಿಳಿಸಿದರು.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

4 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

4 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

22 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago