Advertisement
MIRROR FOCUS

ವಯನಾಡು ಭೀಕರ ದುರಂತ | ಭೂಕುಸಿತದಿಂದ ತಪ್ಪಿಸಿಕೊಂಡವರನ್ನು ಕಾಡಿನಲ್ಲಿ ಕಾಪಾಡಿದ ಕಾಡಾನೆ

Share

ಕೇರಳದ ವಯನಾಡಿನಲ್ಲಿನಡೆದ ದುರಂತ ನಿಜಕ್ಕೂ ಇಡೀ ಮನಕುಲವನ್ನೇ ಬೆಚ್ಚಿ ಬೀಳಿಸುವಂತದ್ದು. ಯಾರೂ, ಎಲ್ಲಿ, ಯಾವಾಗ ಏನಾಯ್ತು ಅನ್ನೋದನ್ನು ತಿಳಿಯುವಷ್ಟರಲ್ಲಿ ಎಲ್ಲವೂ ಮಣ್ಣು ಪಾಲಾಗಿತ್ತು. ಇಂತಹ ದುರಂತದ ನಡುವೆಯೂ ಕುಟುಂಬವೊಂದು ತಪ್ಪಿಸಿಕೊಂಡು ದೀಪದ ಬೆಳಕಿನಲ್ಲಿ ಗುಡ್ಡ ಹತ್ತಿದೆ. ಅಲ್ಲಿ ಹೋದರೆ ಬೆಂಕಿಯಿಂದ ತಪ್ಪಿಸಿಕೊಂಡು ಬಂದವರಿಗೆ ಬಾಣಲೆಗೆ ಬಿದ್ದ ಪರಿಸ್ಥಿತಿ ಎದುರಾಗಿದೆ. ಆದರೆ ಅವರನ್ನು ಕೈ ಹಿಡಿದು ಕಾಪಾಡಿದ್ದು ಅದೇ.

ಸಂಕಷ್ಟದಲ್ಲಿದ್ದ ಸಂತ್ರಸ್ತರಿಗೆ ಆ ಕರಾಳ ರಾತ್ರಿ ಬೆಟ್ಟದಲ್ಲಿ ಎದುರಾಗಿದ್ದು ಒಂದು ದೈತ್ಯ ಕಾಡಾನೆ. ಆದರೆ ಅವರನ್ನು ಕಾಪಾಡಿ ಅವರಿಗೆ ಬೆಳಗಾಗುವ ತನಕ ಕಾವಾಲಾಗಿ ನಿಂತಿದ್ದು ಇದೇ ಗಜರಾಜ. ಸಾವಿನ ದವಡೆಯಿಂದ ಪಾರಾಗಿ ಬಂದ ವೃದ್ಧೆ ಸುಜಾತ ಈ ಕುರಿತು ಸ್ಥಳೀಯರೊಬ್ಬರಿಗೆ ಮಾಹಿತಿ ಕೊಟ್ಟಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗುತ್ತಿದೆ. ಏಶಿಯಾನೆಟ್‌ ನ್ಯೂಸ್‌ ಸಹಿತ ಕೇರಳದ ವಿವಿಧ ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿವೆ.ಮಹಿಳೆಯ ಜೊತೆ ಮಾತನಾಡಿದ್ದಾರೆ. ಅವರು ಹೇಳಿದ್ದು ಹೀಗೆ….

ರಾತ್ರಿ  ಭಾರೀ ಮಳೆಯಾಗುತ್ತಿದ್ದರಿಂದ, ಮಧ್ಯರಾತ್ರಿ 1:15ಕ್ಕೆ ಎಚ್ಚರವಾಯಿತು. ದೊಡ್ಡ ಶಬ್ದ ಕೇಳಿಸಿದ ಬೆನ್ನಲ್ಲೇ ನಮ್ಮ ಮನೆಗೆ ನೀರು ನುಗ್ಗಿತು. ನಾವೆಲ್ಲರೂ ಹಾಸಿಗೆಯ ಮೇಲೆ ಕುಳಿತೆವು. ಆಗ ನಮ್ಮ ನೆರೆಹೊರೆಯವರ ಮನೆಗಳ ಅವಶೇಷಗಳ ಜೊತೆಗೆ ದೊಡ್ಡ ಮರದ ದಿಮ್ಮಿಗಳು ಮನೆಯ ಮೇಲೆ ಬಡಿಯುತ್ತಿದ್ದವು. ನಮ್ಮ ಮನೆಯ ಮೇಲ್ಛಾವಣಿ ನಮ್ಮ ಮೇಲೆ ಕುಸಿದು ಬಿದ್ದಿದ್ದು, ನನ್ನ ಮಗಳು ಗಂಭೀರವಾಗಿ ಗಾಯಗೊಂಡಿದ್ದಳು. ಗುಡ್ಡ ಜರಿದು ಮನೆ ಉರುಳಿ ಬಿದ್ದಾಗ ಮನೆಯ ಚಿಮಿಣಿಯಲ್ಲಿ ಸ್ವಲ್ಪ ಜಾಗ ಕಾಣಿಸಿತು. ನಾನು ಇಟ್ಟಿಗೆ ರಾಶಿಯನ್ನು ಸರಿಸಿ ಜಾಗ ಮಾಡಿಕೊಂಡು ಮಗಳು, ಮೊಮ್ಮಗಳು, ಅಳಿಯ ಎಲ್ಲರೂ ಹೊರ ಬಂದು ಬೆಟ್ಟದ ಬಳಿ ಓಡಿದೆವು.
ಹೇಗೋ ಒದ್ದಾಡಿ ಬೆಟ್ಟದ ಬಳಿಗೆ ಬಂದಾಗ ಅಲ್ಲಿ ದೊಡ್ಡ ಕಾಡಾನೆ ನಿಂತಿತ್ತು. ಆಗ ಆನೆ ಬಳಿ ನಿಂತು ಪ್ರಾರ್ಥನೆ ಮಾಡಿದೆವು. ಒಂದು ದೊಡ್ಡ ದುರಂತದಿಂದ ತಪ್ಪಿಸಿಕೊಂಡು ಬಂದಿದ್ದೇವೆ. ನೀನು ನಮಗೇನೂ ಮಾಡಬೇಡಪ್ಪಾ ಎಂದು ನಾನು ಆನೆಯ ಮುಂದೆ ನಿಂತು ಕಣ್ಣೀರು ಹಾಕಿದೆ. ಆನೆಯ ಕಣ್ಣಿನಿಂದಲೂ ನೀರು ಬಂತು. ರಾತ್ರಿ ಬೆಳಗಾಗುವವರೆಗೆ ನಾವು ಆನೆಯ ಕಾಲಿನ ಹತ್ತಿರವೇ ಸಮಯ ಕಳೆದೆವು. ರಾತ್ರಿ ಪೂರ್ತಿ ಮಳೆ, ಸರಿಯಾಗಿ ನಿಂತುಕೊಳ್ಳಲೂ ಸಾಧ್ಯವಾಗುತ್ತಿರಲಿಲ್ಲ. ಬೆಳಗ್ಗೆ 6 ಗಂಟೆಯಾದಾಗ ಎಲ್ಲಿಂದಲೋ ಜನರು ಬಂದರು. ನಮ್ಮನ್ನು ಕಾಪಾಡಲು ನಮ್ಮ ಊರಿನವರು ಯಾರೂ ಬದುಕುಳಿದಿರಲಿಲ್ಲ. ಆಮೇಲೆ ದೂರದೂರಿನಿಂದ ಬಂದ ಜನರು ನಮ್ಮನ್ನು ಕಾಪಾಡಿ ಸುರಕ್ಷಿತ ಜಾಗಕ್ಕೆ ತಲುಪಿಸಿದರು ಎಂದು ಸುಜಾತ  ತಿಳಿಸಿದರು.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 hour ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

3 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

3 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

13 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

15 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

22 hours ago