Advertisement
MIRROR FOCUS

‘ಪರಿಸರ-2025’ ರಾಷ್ಟ್ರೀಯ ಸಮ್ಮೇಳನ | ಉಸಿರಾಡುವ  ಗಾಳಿ , ಕುಡಿಯುವ ನೀರು ,  ಪಕ್ಷಿಗಳ ಕೂಗಿನ ಬಗ್ಗೆ ಯೋಚಿಸುವ ಅಗತ್ಯವಿದೆ

Share

ಅಭಿವೃದ್ಧಿಯ ಭಾರತೀಯ ಪರಂಪರೆಯ ಆಧಾರವೆಂದರೆ ಶೋಷಣೆಯಲ್ಲ, ಬದಲಾಗಿ ಪೋಷಣೆ, ಸಂರಕ್ಷಣೆ ಎಂದು ಹೇಳಿದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ  ಬಗ್ಗೆ ಚಿಂತಿಸುವ ಪೋಷಕರು ಅವರು ಭವಿಷ್ಯದಲ್ಲಿ ಉಸಿರಾಡುವ  ಗಾಳಿ , ಕುಡಿಯುವ ನೀರು ,  ಪಕ್ಷಿಗಳ ಕೂಗು ಕೇಳಲು ಅವಕಾಶ ದೊರೆಯುವುದೆ ಎನ್ನುವುದರ ಕುರಿತು ಯೋಚಿಸುವ ಅಗತ್ಯವಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.……..ಮುಂದೆ ಓದಿ…..

ಅವರು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ –NGT ಆಯೋಜಿಸಿರುವ ‘ರಾಷ್ಟ್ರೀಯ ಪರಿಸರ ಸಮ್ಮೇಳನ – 2025’ ಕುರಿತ  ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಎಲ್ಲರ ಸಹಕಾರ ಅಗತ್ಯ. ಶುದ್ಧ ಪರಿಸರ, ಆಧುನಿಕ ಅಭಿವೃದ್ಧಿಯನ್ನು ಸಮತೋಲನಗೊಳಿಸುವುದು ಅವಕಾಶ ಮತ್ತು ಸವಾಲು ಆಗಿದೆ. ಪರಿಸರ ನಿರ್ವಹಣೆ, ಪರಿಸರ ವ್ಯವಸ್ಥೆ ಸಂಬಂಧಿಸಿದ ಸಂಸ್ಥೆಗಳು ಮತ್ತು ನಾಗರಿಕರು ಪರಿಸರ ಸಂರಕ್ಷಣೆ ಮತ್ತು ಪ್ರಚಾರಕ್ಕಾಗಿ ನಿರಂತರವಾಗಿ ಶ್ರಮಿಸಬೇಕಾಗಿದೆ ಎಂದು ಹೇಳಿದರು. ಸುಂದರವಾದ ಪ್ರಕೃತಿ, ಕಾಡಿನ ಸೌಂದರ್ಯದ ಅನುಭವ ಹೊಂದಲು ಇರುವ ಸವಾಲುಗಳ ಬಗ್ಗೆ ಗಹನವಾದ ಚರ್ಚೆ ನಡೆಸಲು ಈ ವೇದಿಕೆ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಆರೋಗ್ಯಯುತ ಜೀವನಕ್ಕಾಗಿ ಸ್ವಚ್ಛ ಪರಿಸರ, ಆಧುನಿಕತೆಯ ವಿಕಾಸದ ಸಮನ್ವಯತೆ ಪ್ರಮುಖವಾಗಿದೆ. ವಾಯುಮಾಲಿನ್ಯದಿಂದ ಜೀವಿತಾವಧಿ ಕಡಿಮೆಯಾಗಲಿದೆ ಎಂದು ಅನೇಕ ಅಧ್ಯಯನಗಳು ತಿಳಿಸಿದ್ದು, ಪರಿಸರ ಸ್ವಚ್ಛತೆ ಪ್ರತಿಯೊಬ್ಬರ ನೈತಿಕ ಜವಾಬ್ದಾರಿಯಾಗಿದೆ. ವಿಶ್ವ ಪರಿಸರ ದಿನ, ವಿಶ್ವ ಗುಬ್ಬಚ್ಚಿ ದಿನ, ಅಂತರಾಷ್ಟ್ರೀಯ ಅರಣ್ಯ ದಿನ, ವಿಶ್ವ ವಾಯು ದಿನಗಳ ಆಚರಣೆ ಪರಿಸರ ಸಂರಕ್ಷಣೆಯ ಮಹತ್ವದ ಅರಿವನ್ನು ಮೂಡಿಸುತ್ತವೆ ಎಂದು ದ್ರೌಪದಿ ಮುರ್ಮು ಹೇಳಿದರು.

ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್  ಮಾತನಾಡಿ, ಸರ್ವೇ ಜನ ಸುಖಿನೋಭವಂತು ಎಂಬ ಶ್ಲೋಕ ಕೇವಲ ಮಾನವಸಂಕುಲದ ಸುರಕ್ಷತೆಯಷ್ಟೇ ಅಲ್ಲ, ಪರಿಸರದಲ್ಲಿರವ ಸಕಲ ಜೀವರಾಶಿ, ನದಿ, ಪರ್ವತ, ಅರಣ್ಯ ಸಂಪಲನ್ಮೂಲದ ರಕ್ಷಣೆಯೂ ಸೇರಿದೆ. ಇವುಗಳ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

9 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

9 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

9 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

10 hours ago

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ

ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…

10 hours ago

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…

10 hours ago