Advertisement
MIRROR FOCUS

‘ಪರಿಸರ-2025’ ರಾಷ್ಟ್ರೀಯ ಸಮ್ಮೇಳನ | ಉಸಿರಾಡುವ  ಗಾಳಿ , ಕುಡಿಯುವ ನೀರು ,  ಪಕ್ಷಿಗಳ ಕೂಗಿನ ಬಗ್ಗೆ ಯೋಚಿಸುವ ಅಗತ್ಯವಿದೆ

Share

ಅಭಿವೃದ್ಧಿಯ ಭಾರತೀಯ ಪರಂಪರೆಯ ಆಧಾರವೆಂದರೆ ಶೋಷಣೆಯಲ್ಲ, ಬದಲಾಗಿ ಪೋಷಣೆ, ಸಂರಕ್ಷಣೆ ಎಂದು ಹೇಳಿದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ  ಬಗ್ಗೆ ಚಿಂತಿಸುವ ಪೋಷಕರು ಅವರು ಭವಿಷ್ಯದಲ್ಲಿ ಉಸಿರಾಡುವ  ಗಾಳಿ , ಕುಡಿಯುವ ನೀರು ,  ಪಕ್ಷಿಗಳ ಕೂಗು ಕೇಳಲು ಅವಕಾಶ ದೊರೆಯುವುದೆ ಎನ್ನುವುದರ ಕುರಿತು ಯೋಚಿಸುವ ಅಗತ್ಯವಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.……..ಮುಂದೆ ಓದಿ…..

Advertisement

ಅವರು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ –NGT ಆಯೋಜಿಸಿರುವ ‘ರಾಷ್ಟ್ರೀಯ ಪರಿಸರ ಸಮ್ಮೇಳನ – 2025’ ಕುರಿತ  ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಎಲ್ಲರ ಸಹಕಾರ ಅಗತ್ಯ. ಶುದ್ಧ ಪರಿಸರ, ಆಧುನಿಕ ಅಭಿವೃದ್ಧಿಯನ್ನು ಸಮತೋಲನಗೊಳಿಸುವುದು ಅವಕಾಶ ಮತ್ತು ಸವಾಲು ಆಗಿದೆ. ಪರಿಸರ ನಿರ್ವಹಣೆ, ಪರಿಸರ ವ್ಯವಸ್ಥೆ ಸಂಬಂಧಿಸಿದ ಸಂಸ್ಥೆಗಳು ಮತ್ತು ನಾಗರಿಕರು ಪರಿಸರ ಸಂರಕ್ಷಣೆ ಮತ್ತು ಪ್ರಚಾರಕ್ಕಾಗಿ ನಿರಂತರವಾಗಿ ಶ್ರಮಿಸಬೇಕಾಗಿದೆ ಎಂದು ಹೇಳಿದರು. ಸುಂದರವಾದ ಪ್ರಕೃತಿ, ಕಾಡಿನ ಸೌಂದರ್ಯದ ಅನುಭವ ಹೊಂದಲು ಇರುವ ಸವಾಲುಗಳ ಬಗ್ಗೆ ಗಹನವಾದ ಚರ್ಚೆ ನಡೆಸಲು ಈ ವೇದಿಕೆ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಆರೋಗ್ಯಯುತ ಜೀವನಕ್ಕಾಗಿ ಸ್ವಚ್ಛ ಪರಿಸರ, ಆಧುನಿಕತೆಯ ವಿಕಾಸದ ಸಮನ್ವಯತೆ ಪ್ರಮುಖವಾಗಿದೆ. ವಾಯುಮಾಲಿನ್ಯದಿಂದ ಜೀವಿತಾವಧಿ ಕಡಿಮೆಯಾಗಲಿದೆ ಎಂದು ಅನೇಕ ಅಧ್ಯಯನಗಳು ತಿಳಿಸಿದ್ದು, ಪರಿಸರ ಸ್ವಚ್ಛತೆ ಪ್ರತಿಯೊಬ್ಬರ ನೈತಿಕ ಜವಾಬ್ದಾರಿಯಾಗಿದೆ. ವಿಶ್ವ ಪರಿಸರ ದಿನ, ವಿಶ್ವ ಗುಬ್ಬಚ್ಚಿ ದಿನ, ಅಂತರಾಷ್ಟ್ರೀಯ ಅರಣ್ಯ ದಿನ, ವಿಶ್ವ ವಾಯು ದಿನಗಳ ಆಚರಣೆ ಪರಿಸರ ಸಂರಕ್ಷಣೆಯ ಮಹತ್ವದ ಅರಿವನ್ನು ಮೂಡಿಸುತ್ತವೆ ಎಂದು ದ್ರೌಪದಿ ಮುರ್ಮು ಹೇಳಿದರು.

ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್  ಮಾತನಾಡಿ, ಸರ್ವೇ ಜನ ಸುಖಿನೋಭವಂತು ಎಂಬ ಶ್ಲೋಕ ಕೇವಲ ಮಾನವಸಂಕುಲದ ಸುರಕ್ಷತೆಯಷ್ಟೇ ಅಲ್ಲ, ಪರಿಸರದಲ್ಲಿರವ ಸಕಲ ಜೀವರಾಶಿ, ನದಿ, ಪರ್ವತ, ಅರಣ್ಯ ಸಂಪಲನ್ಮೂಲದ ರಕ್ಷಣೆಯೂ ಸೇರಿದೆ. ಇವುಗಳ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

23 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago