ಅಭಿವೃದ್ಧಿಯ ಭಾರತೀಯ ಪರಂಪರೆಯ ಆಧಾರವೆಂದರೆ ಶೋಷಣೆಯಲ್ಲ, ಬದಲಾಗಿ ಪೋಷಣೆ, ಸಂರಕ್ಷಣೆ ಎಂದು ಹೇಳಿದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ ಬಗ್ಗೆ ಚಿಂತಿಸುವ ಪೋಷಕರು ಅವರು ಭವಿಷ್ಯದಲ್ಲಿ ಉಸಿರಾಡುವ ಗಾಳಿ , ಕುಡಿಯುವ ನೀರು , ಪಕ್ಷಿಗಳ ಕೂಗು ಕೇಳಲು ಅವಕಾಶ ದೊರೆಯುವುದೆ ಎನ್ನುವುದರ ಕುರಿತು ಯೋಚಿಸುವ ಅಗತ್ಯವಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.……..ಮುಂದೆ ಓದಿ…..
ಅವರು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ –NGT ಆಯೋಜಿಸಿರುವ ‘ರಾಷ್ಟ್ರೀಯ ಪರಿಸರ ಸಮ್ಮೇಳನ – 2025’ ಕುರಿತ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಎಲ್ಲರ ಸಹಕಾರ ಅಗತ್ಯ. ಶುದ್ಧ ಪರಿಸರ, ಆಧುನಿಕ ಅಭಿವೃದ್ಧಿಯನ್ನು ಸಮತೋಲನಗೊಳಿಸುವುದು ಅವಕಾಶ ಮತ್ತು ಸವಾಲು ಆಗಿದೆ. ಪರಿಸರ ನಿರ್ವಹಣೆ, ಪರಿಸರ ವ್ಯವಸ್ಥೆ ಸಂಬಂಧಿಸಿದ ಸಂಸ್ಥೆಗಳು ಮತ್ತು ನಾಗರಿಕರು ಪರಿಸರ ಸಂರಕ್ಷಣೆ ಮತ್ತು ಪ್ರಚಾರಕ್ಕಾಗಿ ನಿರಂತರವಾಗಿ ಶ್ರಮಿಸಬೇಕಾಗಿದೆ ಎಂದು ಹೇಳಿದರು. ಸುಂದರವಾದ ಪ್ರಕೃತಿ, ಕಾಡಿನ ಸೌಂದರ್ಯದ ಅನುಭವ ಹೊಂದಲು ಇರುವ ಸವಾಲುಗಳ ಬಗ್ಗೆ ಗಹನವಾದ ಚರ್ಚೆ ನಡೆಸಲು ಈ ವೇದಿಕೆ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಆರೋಗ್ಯಯುತ ಜೀವನಕ್ಕಾಗಿ ಸ್ವಚ್ಛ ಪರಿಸರ, ಆಧುನಿಕತೆಯ ವಿಕಾಸದ ಸಮನ್ವಯತೆ ಪ್ರಮುಖವಾಗಿದೆ. ವಾಯುಮಾಲಿನ್ಯದಿಂದ ಜೀವಿತಾವಧಿ ಕಡಿಮೆಯಾಗಲಿದೆ ಎಂದು ಅನೇಕ ಅಧ್ಯಯನಗಳು ತಿಳಿಸಿದ್ದು, ಪರಿಸರ ಸ್ವಚ್ಛತೆ ಪ್ರತಿಯೊಬ್ಬರ ನೈತಿಕ ಜವಾಬ್ದಾರಿಯಾಗಿದೆ. ವಿಶ್ವ ಪರಿಸರ ದಿನ, ವಿಶ್ವ ಗುಬ್ಬಚ್ಚಿ ದಿನ, ಅಂತರಾಷ್ಟ್ರೀಯ ಅರಣ್ಯ ದಿನ, ವಿಶ್ವ ವಾಯು ದಿನಗಳ ಆಚರಣೆ ಪರಿಸರ ಸಂರಕ್ಷಣೆಯ ಮಹತ್ವದ ಅರಿವನ್ನು ಮೂಡಿಸುತ್ತವೆ ಎಂದು ದ್ರೌಪದಿ ಮುರ್ಮು ಹೇಳಿದರು.
ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಮಾತನಾಡಿ, ಸರ್ವೇ ಜನ ಸುಖಿನೋಭವಂತು ಎಂಬ ಶ್ಲೋಕ ಕೇವಲ ಮಾನವಸಂಕುಲದ ಸುರಕ್ಷತೆಯಷ್ಟೇ ಅಲ್ಲ, ಪರಿಸರದಲ್ಲಿರವ ಸಕಲ ಜೀವರಾಶಿ, ನದಿ, ಪರ್ವತ, ಅರಣ್ಯ ಸಂಪಲನ್ಮೂಲದ ರಕ್ಷಣೆಯೂ ಸೇರಿದೆ. ಇವುಗಳ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಹೇಳಿದರು.
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…