Advertisement
ಸುದ್ದಿಗಳು

ನಂದಿನಿ ಬೇಕು- ಅಮುಲ್ ಬೇಡ | ಕನ್ನಡ ಪರ ಸಂಘಟನೆಗಳಿಂದ ಭುಗಿಲೆದ್ದ ಆಕ್ರೋಶ

Share

ಕರ್ನಾಟಕದಲ್ಲಿ ನಂದಿನಿ ಉಳಿಸಿ ಅಭಿಯಾನ ಜೋರಾಗುತ್ತಿದೆ. ಇದರ ಮಧ್ಯೆ ಅಮುಲ್  ಆನ್‍ಲೈನ್‍ನಲ್ಲಿ ವಿಸ್ತರಣೆಗೊಳ್ಳುತ್ತಿದೆ. ಅತ್ತ ಕೆಎಂಎಫ್ – ಅಮುಲ್ ಹೆಸರಲ್ಲಿ ಮತ್ತೆ ರಾಜಕೀಯ ಜಟಾಪಟಿ ಜೋರಾಗುತ್ತಿದೆ.

ಬೆಂಗಳೂರಲ್ಲಿ ಅಮುಲ್ ವಿರುದ್ಧ ಧಿಕ್ಕಾರದ ಕೂಗು ಮೊಳಗಿದೆ. ಅಮುಲ್ ಉತ್ಪನ್ನ ವಿರೋಧಿಸಿ ಕನ್ನಡ ಪರ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದವು. ಅಮುಲ್ ಚೀಸ್, ಅಮುಲ್ ಬೆಣ್ಣೆ, ತುಪ್ಪ ಹೀಗೆ ಅಮುಲ್ ಪ್ರಾಡಕ್ಟ್ ಗಳನ್ನು ನೆಲಕ್ಕೆಸೆದು ಆಕ್ರೋಶ ಹೊರಹಾಕಿದ್ರು.  ಅಮುಲ್ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ರು.

ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‍ ನಲ್ಲಿ ಕರವೇ ನಾರಾಯಣಗೌಡ ಬಣ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. ಅಮುಲ್ ಉತ್ಪನ್ನ ಆನ್‍ಲೈನ್ ಮಾರಾಟ ಖಂಡಿಸಿದೆ. ಶೀಘ್ರದಲ್ಲಿಯೇ ಅಮುಲ್ ಫ್ಯಾಕ್ಟರಿ, ಅಮುಲ್ ಹಾಲಿನ ಮಾರಾಟ ಘಟಕಕ್ಕೆ ದಾಳಿ ಮಾಡೋದಾಗಿ ಕನ್ನಡ ಪರ ಸಂಘಟನೆ ಎಚ್ಚರಿಕೆ ನೀಡಿದೆ.

ನಂದಿನಿ ಯನ್ನು ಮುಚ್ಚುವ ಹುನ್ನಾರ.. ರಾಜಕೀಯ ಷಡ್ಯಂತ್ರ ಅಂತಾ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ರು. ಕೊನೆಗೆ ಅಮುಲ್ ಹೆಸರು ಬೋರ್ಡ್ ಇರುವ ಪ್ರತಿಕೃತಿ ದಹನಕ್ಕೆ ಮುಂದಾದಾಗ ಪೊಲೀಸರು ಪ್ರತಿಭಟನೆಕಾರರನ್ನು ವಶಕ್ಕೆ ಪಡೆದುಕೊಂಡ್ರು.

ಹೆಚ್‍ಡಿಕೆ ವ್ಯಂಗ್ಯ: ಬಿಜೆಪಿ ಅವರಿಗೆ ಅಮುಲ್ ಪರಿಣಾಮದ ಮಾಹಿತಿ ಇಲ್ಲ. ಬಿಜೆಪಿ ಅವರ ಕಣ್ಣಿಗೆ ಮೋದಿ ಬಿಟ್ಟರೆ ಏನೂ ಕಾಣಲ್ಲ ಅಂತ ಹೆಚ್‍ಡಿಕೆ ಟೀಕಿಸಿದ್ದಾರೆ. ಈ ವಿಚಾರದಲ್ಲಿ ಎಚ್ಚರಿಕೆಯಿಂದ ತೀರ್ಮಾನ ತೆಗೆದುಕೊಳ್ಳದೆ ಇದ್ರೆ ನಂದಿನಿ ಮುಳುಗಿಸುತ್ತಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

 

ಸಿಎಂ ಬೊಮ್ಮಾಯಿ ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ. ರಾಷ್ಟ್ರಮಟ್ಟದಲ್ಲಿ ನಂದಿನಿ ಬ್ರಾಂಡ್ ನಂಬರ್ 1 ಆಗಿಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ನಂದಿನಿ ಮಾರುಕಟ್ಟೆ ವ್ಯಾಪ್ತಿ ವಿಶಾಲವಾಗಿದ್ದು, ಅಮೂಲ್ ಬಗ್ಗೆ ಯಾವುದೇ ಭಯ ಬೇಡ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಒಟ್ಟಿನಲ್ಲಿ ಚುನಾವಣೆಯ ಹೊಸ್ತಿಲಲ್ಲಿ ಅಮುಲ್ ಕಿಡಿ ಜ್ವಾಲೆಯಾಗಿ ಹಬ್ಬಿದೆ. ಕನ್ನಡಿಗರ ಆಕ್ರೋಶ ಸ್ಫೋಟಗೊಂಡಿದೆ. ನಂದಿನಿ ಉಳಿಸಿ ಅಮುಲ್ ತೊಲಗಿಸಿ ಕ್ಯಾಂಪೇನ್ ಜೋರಾಗಿ ಸದ್ದು ಮಾಡುತ್ತ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

9 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

9 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

9 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

10 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

22 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago