Advertisement
ಸುದ್ದಿಗಳು

ನಂದಿನಿ ಬೇಕು- ಅಮುಲ್ ಬೇಡ | ಕನ್ನಡ ಪರ ಸಂಘಟನೆಗಳಿಂದ ಭುಗಿಲೆದ್ದ ಆಕ್ರೋಶ

Share

ಕರ್ನಾಟಕದಲ್ಲಿ ನಂದಿನಿ ಉಳಿಸಿ ಅಭಿಯಾನ ಜೋರಾಗುತ್ತಿದೆ. ಇದರ ಮಧ್ಯೆ ಅಮುಲ್  ಆನ್‍ಲೈನ್‍ನಲ್ಲಿ ವಿಸ್ತರಣೆಗೊಳ್ಳುತ್ತಿದೆ. ಅತ್ತ ಕೆಎಂಎಫ್ – ಅಮುಲ್ ಹೆಸರಲ್ಲಿ ಮತ್ತೆ ರಾಜಕೀಯ ಜಟಾಪಟಿ ಜೋರಾಗುತ್ತಿದೆ.

ಬೆಂಗಳೂರಲ್ಲಿ ಅಮುಲ್ ವಿರುದ್ಧ ಧಿಕ್ಕಾರದ ಕೂಗು ಮೊಳಗಿದೆ. ಅಮುಲ್ ಉತ್ಪನ್ನ ವಿರೋಧಿಸಿ ಕನ್ನಡ ಪರ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದವು. ಅಮುಲ್ ಚೀಸ್, ಅಮುಲ್ ಬೆಣ್ಣೆ, ತುಪ್ಪ ಹೀಗೆ ಅಮುಲ್ ಪ್ರಾಡಕ್ಟ್ ಗಳನ್ನು ನೆಲಕ್ಕೆಸೆದು ಆಕ್ರೋಶ ಹೊರಹಾಕಿದ್ರು.  ಅಮುಲ್ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ರು.

ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‍ ನಲ್ಲಿ ಕರವೇ ನಾರಾಯಣಗೌಡ ಬಣ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. ಅಮುಲ್ ಉತ್ಪನ್ನ ಆನ್‍ಲೈನ್ ಮಾರಾಟ ಖಂಡಿಸಿದೆ. ಶೀಘ್ರದಲ್ಲಿಯೇ ಅಮುಲ್ ಫ್ಯಾಕ್ಟರಿ, ಅಮುಲ್ ಹಾಲಿನ ಮಾರಾಟ ಘಟಕಕ್ಕೆ ದಾಳಿ ಮಾಡೋದಾಗಿ ಕನ್ನಡ ಪರ ಸಂಘಟನೆ ಎಚ್ಚರಿಕೆ ನೀಡಿದೆ.

ನಂದಿನಿ ಯನ್ನು ಮುಚ್ಚುವ ಹುನ್ನಾರ.. ರಾಜಕೀಯ ಷಡ್ಯಂತ್ರ ಅಂತಾ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ರು. ಕೊನೆಗೆ ಅಮುಲ್ ಹೆಸರು ಬೋರ್ಡ್ ಇರುವ ಪ್ರತಿಕೃತಿ ದಹನಕ್ಕೆ ಮುಂದಾದಾಗ ಪೊಲೀಸರು ಪ್ರತಿಭಟನೆಕಾರರನ್ನು ವಶಕ್ಕೆ ಪಡೆದುಕೊಂಡ್ರು.

ಹೆಚ್‍ಡಿಕೆ ವ್ಯಂಗ್ಯ: ಬಿಜೆಪಿ ಅವರಿಗೆ ಅಮುಲ್ ಪರಿಣಾಮದ ಮಾಹಿತಿ ಇಲ್ಲ. ಬಿಜೆಪಿ ಅವರ ಕಣ್ಣಿಗೆ ಮೋದಿ ಬಿಟ್ಟರೆ ಏನೂ ಕಾಣಲ್ಲ ಅಂತ ಹೆಚ್‍ಡಿಕೆ ಟೀಕಿಸಿದ್ದಾರೆ. ಈ ವಿಚಾರದಲ್ಲಿ ಎಚ್ಚರಿಕೆಯಿಂದ ತೀರ್ಮಾನ ತೆಗೆದುಕೊಳ್ಳದೆ ಇದ್ರೆ ನಂದಿನಿ ಮುಳುಗಿಸುತ್ತಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

 

ಸಿಎಂ ಬೊಮ್ಮಾಯಿ ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ. ರಾಷ್ಟ್ರಮಟ್ಟದಲ್ಲಿ ನಂದಿನಿ ಬ್ರಾಂಡ್ ನಂಬರ್ 1 ಆಗಿಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ನಂದಿನಿ ಮಾರುಕಟ್ಟೆ ವ್ಯಾಪ್ತಿ ವಿಶಾಲವಾಗಿದ್ದು, ಅಮೂಲ್ ಬಗ್ಗೆ ಯಾವುದೇ ಭಯ ಬೇಡ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಒಟ್ಟಿನಲ್ಲಿ ಚುನಾವಣೆಯ ಹೊಸ್ತಿಲಲ್ಲಿ ಅಮುಲ್ ಕಿಡಿ ಜ್ವಾಲೆಯಾಗಿ ಹಬ್ಬಿದೆ. ಕನ್ನಡಿಗರ ಆಕ್ರೋಶ ಸ್ಫೋಟಗೊಂಡಿದೆ. ನಂದಿನಿ ಉಳಿಸಿ ಅಮುಲ್ ತೊಲಗಿಸಿ ಕ್ಯಾಂಪೇನ್ ಜೋರಾಗಿ ಸದ್ದು ಮಾಡುತ್ತ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

16 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

18 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

19 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

19 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

20 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

1 day ago