Advertisement
ಸುದ್ದಿಗಳು

ನಂದಿನಿ ಬೇಕು- ಅಮುಲ್ ಬೇಡ | ಕನ್ನಡ ಪರ ಸಂಘಟನೆಗಳಿಂದ ಭುಗಿಲೆದ್ದ ಆಕ್ರೋಶ

Share

ಕರ್ನಾಟಕದಲ್ಲಿ ನಂದಿನಿ ಉಳಿಸಿ ಅಭಿಯಾನ ಜೋರಾಗುತ್ತಿದೆ. ಇದರ ಮಧ್ಯೆ ಅಮುಲ್  ಆನ್‍ಲೈನ್‍ನಲ್ಲಿ ವಿಸ್ತರಣೆಗೊಳ್ಳುತ್ತಿದೆ. ಅತ್ತ ಕೆಎಂಎಫ್ – ಅಮುಲ್ ಹೆಸರಲ್ಲಿ ಮತ್ತೆ ರಾಜಕೀಯ ಜಟಾಪಟಿ ಜೋರಾಗುತ್ತಿದೆ.

ಬೆಂಗಳೂರಲ್ಲಿ ಅಮುಲ್ ವಿರುದ್ಧ ಧಿಕ್ಕಾರದ ಕೂಗು ಮೊಳಗಿದೆ. ಅಮುಲ್ ಉತ್ಪನ್ನ ವಿರೋಧಿಸಿ ಕನ್ನಡ ಪರ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದವು. ಅಮುಲ್ ಚೀಸ್, ಅಮುಲ್ ಬೆಣ್ಣೆ, ತುಪ್ಪ ಹೀಗೆ ಅಮುಲ್ ಪ್ರಾಡಕ್ಟ್ ಗಳನ್ನು ನೆಲಕ್ಕೆಸೆದು ಆಕ್ರೋಶ ಹೊರಹಾಕಿದ್ರು.  ಅಮುಲ್ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ರು.

ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‍ ನಲ್ಲಿ ಕರವೇ ನಾರಾಯಣಗೌಡ ಬಣ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. ಅಮುಲ್ ಉತ್ಪನ್ನ ಆನ್‍ಲೈನ್ ಮಾರಾಟ ಖಂಡಿಸಿದೆ. ಶೀಘ್ರದಲ್ಲಿಯೇ ಅಮುಲ್ ಫ್ಯಾಕ್ಟರಿ, ಅಮುಲ್ ಹಾಲಿನ ಮಾರಾಟ ಘಟಕಕ್ಕೆ ದಾಳಿ ಮಾಡೋದಾಗಿ ಕನ್ನಡ ಪರ ಸಂಘಟನೆ ಎಚ್ಚರಿಕೆ ನೀಡಿದೆ.

ನಂದಿನಿ ಯನ್ನು ಮುಚ್ಚುವ ಹುನ್ನಾರ.. ರಾಜಕೀಯ ಷಡ್ಯಂತ್ರ ಅಂತಾ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ರು. ಕೊನೆಗೆ ಅಮುಲ್ ಹೆಸರು ಬೋರ್ಡ್ ಇರುವ ಪ್ರತಿಕೃತಿ ದಹನಕ್ಕೆ ಮುಂದಾದಾಗ ಪೊಲೀಸರು ಪ್ರತಿಭಟನೆಕಾರರನ್ನು ವಶಕ್ಕೆ ಪಡೆದುಕೊಂಡ್ರು.

ಹೆಚ್‍ಡಿಕೆ ವ್ಯಂಗ್ಯ: ಬಿಜೆಪಿ ಅವರಿಗೆ ಅಮುಲ್ ಪರಿಣಾಮದ ಮಾಹಿತಿ ಇಲ್ಲ. ಬಿಜೆಪಿ ಅವರ ಕಣ್ಣಿಗೆ ಮೋದಿ ಬಿಟ್ಟರೆ ಏನೂ ಕಾಣಲ್ಲ ಅಂತ ಹೆಚ್‍ಡಿಕೆ ಟೀಕಿಸಿದ್ದಾರೆ. ಈ ವಿಚಾರದಲ್ಲಿ ಎಚ್ಚರಿಕೆಯಿಂದ ತೀರ್ಮಾನ ತೆಗೆದುಕೊಳ್ಳದೆ ಇದ್ರೆ ನಂದಿನಿ ಮುಳುಗಿಸುತ್ತಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

 

ಸಿಎಂ ಬೊಮ್ಮಾಯಿ ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ. ರಾಷ್ಟ್ರಮಟ್ಟದಲ್ಲಿ ನಂದಿನಿ ಬ್ರಾಂಡ್ ನಂಬರ್ 1 ಆಗಿಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ನಂದಿನಿ ಮಾರುಕಟ್ಟೆ ವ್ಯಾಪ್ತಿ ವಿಶಾಲವಾಗಿದ್ದು, ಅಮೂಲ್ ಬಗ್ಗೆ ಯಾವುದೇ ಭಯ ಬೇಡ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಒಟ್ಟಿನಲ್ಲಿ ಚುನಾವಣೆಯ ಹೊಸ್ತಿಲಲ್ಲಿ ಅಮುಲ್ ಕಿಡಿ ಜ್ವಾಲೆಯಾಗಿ ಹಬ್ಬಿದೆ. ಕನ್ನಡಿಗರ ಆಕ್ರೋಶ ಸ್ಫೋಟಗೊಂಡಿದೆ. ನಂದಿನಿ ಉಳಿಸಿ ಅಮುಲ್ ತೊಲಗಿಸಿ ಕ್ಯಾಂಪೇನ್ ಜೋರಾಗಿ ಸದ್ದು ಮಾಡುತ್ತ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

3 minutes ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

9 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

17 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

17 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago