#NoRain |ದೇಶವ್ಯಾಪಿ ಕ್ಷೀಣಿಸಿದ ಮುಂಗಾರು – ದಕ್ಷಿಣ ಭಾರತದ ರಾಜ್ಯಗಳೇ ಅತಿ ಹೆಚ್ಚು ಮಳೆ ಕೊರತೆ | ರಾಜ್ಯದ 25 ಜಿಲ್ಲೆಗಳಲ್ಲಿ ಕೃಪೆ ತೋರದ ವರುಣ

July 13, 2023
12:04 PM
ದೇಶವ್ಯಾಪಿ ಈ ಬಾರಿ ಮುಂಗಾರು ಕ್ಷೀಣ, ದಕ್ಷಿಣ ರಾಜ್ಯಗಳಲ್ಲಿ ಭಾರಿ ಮಳೆ ಕೊರತೆ

ಸಕಾಲಕ್ಕೆ ಮಳೆ ಬಂದ್ರೆನೇ ಬೆಳೆ. ಸರಿಯಾದ ಪ್ರಮಾಣದಲ್ಲಿ ದೇಶದಲ್ಲಿ ಮಳೆ ಬಾರದೆ ಹೋದರೆ ರೈತ ಹಾಗೂ ರೈತನನ್ನು ನಂಬಿದ ಜನಕ್ಕೂ ತೊಂದರೆಯೇ. ಈ ಬಾರಿ ಮುಂಗಾರು ಅಷ್ಟಾಗಿ ಕರುಣೆ ತೋರಲಿಲ್ಲ. ಉತ್ತರ ಭಾರತದಲ್ಲಿ ಪ್ರವಾಹ ಬಂದು ಕೊಚ್ಚಿಕೊಂಡು ಹೋದರೂ, ದೇಶಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದೆ. ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯ ಪ್ರಮಾಣ ಭಾರಿ ಕಡಿಮೆಯಾಗಿದೆ.

ದೇಶವ್ಯಾಪಿ ಮುಂಗಾರು#Monsoon ಕುಂಠಿತವಾಗಿದ್ದು, ಕರ್ನಾಟಕ#Karnataka ಸೇರಿದಂತೆ 17 ರಾಜ್ಯಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ರಾಜ್ಯದಲ್ಲಿ ಜೂನ್ ತಿಂಗಳಲ್ಲಿ 25 ಜಿಲ್ಲೆಗಳ 87 ತಾಲೂಕುಗಳಲ್ಲಿ ಮಳೆ#Rain ಕೊರತೆ ಉಂಟಾಗಿದೆ. ಈ ಬಾರಿ ದಕ್ಷಿಣ ಭಾರತದ ರಾಜ್ಯಗಳೇ ಅತಿ ಹೆಚ್ಚು ಮಳೆ ಕೊರತೆ ಎದುರಿಸುತ್ತಿದೆ. ದಕ್ಷಿಣ ಭಾರತದಲ್ಲಿ 45% ರಷ್ಟು ಮುಂಗಾರಿನ ಕೊರತೆಯಾಗಿದೆ. ವಾಯುವ್ಯ ಭಾರತದ ರಾಜ್ಯಗಳನ್ನು ಹೊರತುಪಡಿಸಿದರೆ ಉಳಿದೆಲ್ಲಾ ಕಡೆ ಮುಂಗಾರು ಕೈಕೊಟ್ಟಿದೆ. ಆದರೆ ವಾಯುವ್ಯದಲ್ಲಿ ವಾಡಿಕೆಗಿಂತ 42% ರಷ್ಟು ಅಧಿಕ ಮಳೆಯಾಗಿದೆ.

ಮಧ್ಯ ಭಾರತದಲ್ಲಿ 6%, ದಕ್ಷಿಣ ಭಾರತದಲ್ಲಿ 45%, ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ 18% ರಷ್ಟು ಕಡಿಮೆ ಮಳೆಯಾಗಿದೆ. ದಕ್ಷಿಣ ರಾಜ್ಯಗಳಲ್ಲಿ ವಾಡಿಕೆಯಂತೆ 161 ಮಿ.ಮಿ ಮಳೆಯಾಗಬೇಕಿತ್ತು. ಆದರೆ ಈ ಬಾರಿ ಕೇವಲ 88 ಮಿ.ಮಿ ಮಳೆಯಷ್ಟೇ ದಾಖಲಾಗಿದೆ. ದಕ್ಷಿಣ ರಾಜ್ಯಗಳ ಪೈಕಿ ಕೇರಳದಲ್ಲಿ ಈ ಬಾರಿ 70% ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.

ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಅಭಾವ:
ಜೂನ್ 1 ರಿಂದ 29 ರವರೆಗೆ ವಾಡಿಕೆಗಿಂತ 57% ರಷ್ಟು ಕಡಿಮೆ ಮಳೆಯಾಗಿದೆ. ಜೂನ್ ತಿಂಗಳಲ್ಲಿ 25 ಜಿಲ್ಲೆಗಳ 87 ತಾಲೂಕುಗಳಲ್ಲಿ ಮಳೆ ಕೊರತೆಯುಂಟಾಗಿದೆ. ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಕೊಪ್ಪಳ, ಧಾರವಾಡ, ಶಿವಮೊಗ್ಗ, ಹಾಸನ, ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಬೆಂಗಳೂರು ನಗರ, ಗ್ರಾಮಾಂತರದಲ್ಲಿ 20% ರಷ್ಟು ಕಡಿಮೆ ಮಳೆಯಾಗಿದೆ. ದಕ್ಷಿಣ ಕರ್ನಾಟಕದಲ್ಲಿ 22%, ಉತ್ತರ ಕರ್ನಾಟಕದಲ್ಲಿ 21%, ಮಲೆನಾಡಲ್ಲಿ 64%, ಕರಾವಳಿಯಲ್ಲಿ 19% ರಷ್ಟು ಕಡಿಮೆ ಮಳೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror