ಸಕಾಲಕ್ಕೆ ಮಳೆ ಬಂದ್ರೆನೇ ಬೆಳೆ. ಸರಿಯಾದ ಪ್ರಮಾಣದಲ್ಲಿ ದೇಶದಲ್ಲಿ ಮಳೆ ಬಾರದೆ ಹೋದರೆ ರೈತ ಹಾಗೂ ರೈತನನ್ನು ನಂಬಿದ ಜನಕ್ಕೂ ತೊಂದರೆಯೇ. ಈ ಬಾರಿ ಮುಂಗಾರು ಅಷ್ಟಾಗಿ ಕರುಣೆ ತೋರಲಿಲ್ಲ. ಉತ್ತರ ಭಾರತದಲ್ಲಿ ಪ್ರವಾಹ ಬಂದು ಕೊಚ್ಚಿಕೊಂಡು ಹೋದರೂ, ದೇಶಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದೆ. ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯ ಪ್ರಮಾಣ ಭಾರಿ ಕಡಿಮೆಯಾಗಿದೆ.
ದೇಶವ್ಯಾಪಿ ಮುಂಗಾರು#Monsoon ಕುಂಠಿತವಾಗಿದ್ದು, ಕರ್ನಾಟಕ#Karnataka ಸೇರಿದಂತೆ 17 ರಾಜ್ಯಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ರಾಜ್ಯದಲ್ಲಿ ಜೂನ್ ತಿಂಗಳಲ್ಲಿ 25 ಜಿಲ್ಲೆಗಳ 87 ತಾಲೂಕುಗಳಲ್ಲಿ ಮಳೆ#Rain ಕೊರತೆ ಉಂಟಾಗಿದೆ. ಈ ಬಾರಿ ದಕ್ಷಿಣ ಭಾರತದ ರಾಜ್ಯಗಳೇ ಅತಿ ಹೆಚ್ಚು ಮಳೆ ಕೊರತೆ ಎದುರಿಸುತ್ತಿದೆ. ದಕ್ಷಿಣ ಭಾರತದಲ್ಲಿ 45% ರಷ್ಟು ಮುಂಗಾರಿನ ಕೊರತೆಯಾಗಿದೆ. ವಾಯುವ್ಯ ಭಾರತದ ರಾಜ್ಯಗಳನ್ನು ಹೊರತುಪಡಿಸಿದರೆ ಉಳಿದೆಲ್ಲಾ ಕಡೆ ಮುಂಗಾರು ಕೈಕೊಟ್ಟಿದೆ. ಆದರೆ ವಾಯುವ್ಯದಲ್ಲಿ ವಾಡಿಕೆಗಿಂತ 42% ರಷ್ಟು ಅಧಿಕ ಮಳೆಯಾಗಿದೆ.
ಮಧ್ಯ ಭಾರತದಲ್ಲಿ 6%, ದಕ್ಷಿಣ ಭಾರತದಲ್ಲಿ 45%, ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ 18% ರಷ್ಟು ಕಡಿಮೆ ಮಳೆಯಾಗಿದೆ. ದಕ್ಷಿಣ ರಾಜ್ಯಗಳಲ್ಲಿ ವಾಡಿಕೆಯಂತೆ 161 ಮಿ.ಮಿ ಮಳೆಯಾಗಬೇಕಿತ್ತು. ಆದರೆ ಈ ಬಾರಿ ಕೇವಲ 88 ಮಿ.ಮಿ ಮಳೆಯಷ್ಟೇ ದಾಖಲಾಗಿದೆ. ದಕ್ಷಿಣ ರಾಜ್ಯಗಳ ಪೈಕಿ ಕೇರಳದಲ್ಲಿ ಈ ಬಾರಿ 70% ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.
ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಅಭಾವ:
ಜೂನ್ 1 ರಿಂದ 29 ರವರೆಗೆ ವಾಡಿಕೆಗಿಂತ 57% ರಷ್ಟು ಕಡಿಮೆ ಮಳೆಯಾಗಿದೆ. ಜೂನ್ ತಿಂಗಳಲ್ಲಿ 25 ಜಿಲ್ಲೆಗಳ 87 ತಾಲೂಕುಗಳಲ್ಲಿ ಮಳೆ ಕೊರತೆಯುಂಟಾಗಿದೆ. ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಕೊಪ್ಪಳ, ಧಾರವಾಡ, ಶಿವಮೊಗ್ಗ, ಹಾಸನ, ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಬೆಂಗಳೂರು ನಗರ, ಗ್ರಾಮಾಂತರದಲ್ಲಿ 20% ರಷ್ಟು ಕಡಿಮೆ ಮಳೆಯಾಗಿದೆ. ದಕ್ಷಿಣ ಕರ್ನಾಟಕದಲ್ಲಿ 22%, ಉತ್ತರ ಕರ್ನಾಟಕದಲ್ಲಿ 21%, ಮಲೆನಾಡಲ್ಲಿ 64%, ಕರಾವಳಿಯಲ್ಲಿ 19% ರಷ್ಟು ಕಡಿಮೆ ಮಳೆಯಾಗಿದೆ.
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…
ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ…