Advertisement
ಪ್ರಮುಖ

#NoRain |ದೇಶವ್ಯಾಪಿ ಕ್ಷೀಣಿಸಿದ ಮುಂಗಾರು – ದಕ್ಷಿಣ ಭಾರತದ ರಾಜ್ಯಗಳೇ ಅತಿ ಹೆಚ್ಚು ಮಳೆ ಕೊರತೆ | ರಾಜ್ಯದ 25 ಜಿಲ್ಲೆಗಳಲ್ಲಿ ಕೃಪೆ ತೋರದ ವರುಣ

Share

ಸಕಾಲಕ್ಕೆ ಮಳೆ ಬಂದ್ರೆನೇ ಬೆಳೆ. ಸರಿಯಾದ ಪ್ರಮಾಣದಲ್ಲಿ ದೇಶದಲ್ಲಿ ಮಳೆ ಬಾರದೆ ಹೋದರೆ ರೈತ ಹಾಗೂ ರೈತನನ್ನು ನಂಬಿದ ಜನಕ್ಕೂ ತೊಂದರೆಯೇ. ಈ ಬಾರಿ ಮುಂಗಾರು ಅಷ್ಟಾಗಿ ಕರುಣೆ ತೋರಲಿಲ್ಲ. ಉತ್ತರ ಭಾರತದಲ್ಲಿ ಪ್ರವಾಹ ಬಂದು ಕೊಚ್ಚಿಕೊಂಡು ಹೋದರೂ, ದೇಶಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದೆ. ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯ ಪ್ರಮಾಣ ಭಾರಿ ಕಡಿಮೆಯಾಗಿದೆ.

Advertisement
Advertisement
Advertisement
Advertisement

ದೇಶವ್ಯಾಪಿ ಮುಂಗಾರು#Monsoon ಕುಂಠಿತವಾಗಿದ್ದು, ಕರ್ನಾಟಕ#Karnataka ಸೇರಿದಂತೆ 17 ರಾಜ್ಯಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ರಾಜ್ಯದಲ್ಲಿ ಜೂನ್ ತಿಂಗಳಲ್ಲಿ 25 ಜಿಲ್ಲೆಗಳ 87 ತಾಲೂಕುಗಳಲ್ಲಿ ಮಳೆ#Rain ಕೊರತೆ ಉಂಟಾಗಿದೆ. ಈ ಬಾರಿ ದಕ್ಷಿಣ ಭಾರತದ ರಾಜ್ಯಗಳೇ ಅತಿ ಹೆಚ್ಚು ಮಳೆ ಕೊರತೆ ಎದುರಿಸುತ್ತಿದೆ. ದಕ್ಷಿಣ ಭಾರತದಲ್ಲಿ 45% ರಷ್ಟು ಮುಂಗಾರಿನ ಕೊರತೆಯಾಗಿದೆ. ವಾಯುವ್ಯ ಭಾರತದ ರಾಜ್ಯಗಳನ್ನು ಹೊರತುಪಡಿಸಿದರೆ ಉಳಿದೆಲ್ಲಾ ಕಡೆ ಮುಂಗಾರು ಕೈಕೊಟ್ಟಿದೆ. ಆದರೆ ವಾಯುವ್ಯದಲ್ಲಿ ವಾಡಿಕೆಗಿಂತ 42% ರಷ್ಟು ಅಧಿಕ ಮಳೆಯಾಗಿದೆ.

Advertisement

ಮಧ್ಯ ಭಾರತದಲ್ಲಿ 6%, ದಕ್ಷಿಣ ಭಾರತದಲ್ಲಿ 45%, ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ 18% ರಷ್ಟು ಕಡಿಮೆ ಮಳೆಯಾಗಿದೆ. ದಕ್ಷಿಣ ರಾಜ್ಯಗಳಲ್ಲಿ ವಾಡಿಕೆಯಂತೆ 161 ಮಿ.ಮಿ ಮಳೆಯಾಗಬೇಕಿತ್ತು. ಆದರೆ ಈ ಬಾರಿ ಕೇವಲ 88 ಮಿ.ಮಿ ಮಳೆಯಷ್ಟೇ ದಾಖಲಾಗಿದೆ. ದಕ್ಷಿಣ ರಾಜ್ಯಗಳ ಪೈಕಿ ಕೇರಳದಲ್ಲಿ ಈ ಬಾರಿ 70% ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.

ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಅಭಾವ:
ಜೂನ್ 1 ರಿಂದ 29 ರವರೆಗೆ ವಾಡಿಕೆಗಿಂತ 57% ರಷ್ಟು ಕಡಿಮೆ ಮಳೆಯಾಗಿದೆ. ಜೂನ್ ತಿಂಗಳಲ್ಲಿ 25 ಜಿಲ್ಲೆಗಳ 87 ತಾಲೂಕುಗಳಲ್ಲಿ ಮಳೆ ಕೊರತೆಯುಂಟಾಗಿದೆ. ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಕೊಪ್ಪಳ, ಧಾರವಾಡ, ಶಿವಮೊಗ್ಗ, ಹಾಸನ, ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಬೆಂಗಳೂರು ನಗರ, ಗ್ರಾಮಾಂತರದಲ್ಲಿ 20% ರಷ್ಟು ಕಡಿಮೆ ಮಳೆಯಾಗಿದೆ. ದಕ್ಷಿಣ ಕರ್ನಾಟಕದಲ್ಲಿ 22%, ಉತ್ತರ ಕರ್ನಾಟಕದಲ್ಲಿ 21%, ಮಲೆನಾಡಲ್ಲಿ 64%, ಕರಾವಳಿಯಲ್ಲಿ 19% ರಷ್ಟು ಕಡಿಮೆ ಮಳೆಯಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

12 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago