ಪ್ರಮುಖ

#NoRain |ದೇಶವ್ಯಾಪಿ ಕ್ಷೀಣಿಸಿದ ಮುಂಗಾರು – ದಕ್ಷಿಣ ಭಾರತದ ರಾಜ್ಯಗಳೇ ಅತಿ ಹೆಚ್ಚು ಮಳೆ ಕೊರತೆ | ರಾಜ್ಯದ 25 ಜಿಲ್ಲೆಗಳಲ್ಲಿ ಕೃಪೆ ತೋರದ ವರುಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಕಾಲಕ್ಕೆ ಮಳೆ ಬಂದ್ರೆನೇ ಬೆಳೆ. ಸರಿಯಾದ ಪ್ರಮಾಣದಲ್ಲಿ ದೇಶದಲ್ಲಿ ಮಳೆ ಬಾರದೆ ಹೋದರೆ ರೈತ ಹಾಗೂ ರೈತನನ್ನು ನಂಬಿದ ಜನಕ್ಕೂ ತೊಂದರೆಯೇ. ಈ ಬಾರಿ ಮುಂಗಾರು ಅಷ್ಟಾಗಿ ಕರುಣೆ ತೋರಲಿಲ್ಲ. ಉತ್ತರ ಭಾರತದಲ್ಲಿ ಪ್ರವಾಹ ಬಂದು ಕೊಚ್ಚಿಕೊಂಡು ಹೋದರೂ, ದೇಶಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದೆ. ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯ ಪ್ರಮಾಣ ಭಾರಿ ಕಡಿಮೆಯಾಗಿದೆ.

Advertisement
Advertisement

ದೇಶವ್ಯಾಪಿ ಮುಂಗಾರು#Monsoon ಕುಂಠಿತವಾಗಿದ್ದು, ಕರ್ನಾಟಕ#Karnataka ಸೇರಿದಂತೆ 17 ರಾಜ್ಯಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ರಾಜ್ಯದಲ್ಲಿ ಜೂನ್ ತಿಂಗಳಲ್ಲಿ 25 ಜಿಲ್ಲೆಗಳ 87 ತಾಲೂಕುಗಳಲ್ಲಿ ಮಳೆ#Rain ಕೊರತೆ ಉಂಟಾಗಿದೆ. ಈ ಬಾರಿ ದಕ್ಷಿಣ ಭಾರತದ ರಾಜ್ಯಗಳೇ ಅತಿ ಹೆಚ್ಚು ಮಳೆ ಕೊರತೆ ಎದುರಿಸುತ್ತಿದೆ. ದಕ್ಷಿಣ ಭಾರತದಲ್ಲಿ 45% ರಷ್ಟು ಮುಂಗಾರಿನ ಕೊರತೆಯಾಗಿದೆ. ವಾಯುವ್ಯ ಭಾರತದ ರಾಜ್ಯಗಳನ್ನು ಹೊರತುಪಡಿಸಿದರೆ ಉಳಿದೆಲ್ಲಾ ಕಡೆ ಮುಂಗಾರು ಕೈಕೊಟ್ಟಿದೆ. ಆದರೆ ವಾಯುವ್ಯದಲ್ಲಿ ವಾಡಿಕೆಗಿಂತ 42% ರಷ್ಟು ಅಧಿಕ ಮಳೆಯಾಗಿದೆ.

ಮಧ್ಯ ಭಾರತದಲ್ಲಿ 6%, ದಕ್ಷಿಣ ಭಾರತದಲ್ಲಿ 45%, ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ 18% ರಷ್ಟು ಕಡಿಮೆ ಮಳೆಯಾಗಿದೆ. ದಕ್ಷಿಣ ರಾಜ್ಯಗಳಲ್ಲಿ ವಾಡಿಕೆಯಂತೆ 161 ಮಿ.ಮಿ ಮಳೆಯಾಗಬೇಕಿತ್ತು. ಆದರೆ ಈ ಬಾರಿ ಕೇವಲ 88 ಮಿ.ಮಿ ಮಳೆಯಷ್ಟೇ ದಾಖಲಾಗಿದೆ. ದಕ್ಷಿಣ ರಾಜ್ಯಗಳ ಪೈಕಿ ಕೇರಳದಲ್ಲಿ ಈ ಬಾರಿ 70% ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.

ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಅಭಾವ:
ಜೂನ್ 1 ರಿಂದ 29 ರವರೆಗೆ ವಾಡಿಕೆಗಿಂತ 57% ರಷ್ಟು ಕಡಿಮೆ ಮಳೆಯಾಗಿದೆ. ಜೂನ್ ತಿಂಗಳಲ್ಲಿ 25 ಜಿಲ್ಲೆಗಳ 87 ತಾಲೂಕುಗಳಲ್ಲಿ ಮಳೆ ಕೊರತೆಯುಂಟಾಗಿದೆ. ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಕೊಪ್ಪಳ, ಧಾರವಾಡ, ಶಿವಮೊಗ್ಗ, ಹಾಸನ, ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಬೆಂಗಳೂರು ನಗರ, ಗ್ರಾಮಾಂತರದಲ್ಲಿ 20% ರಷ್ಟು ಕಡಿಮೆ ಮಳೆಯಾಗಿದೆ. ದಕ್ಷಿಣ ಕರ್ನಾಟಕದಲ್ಲಿ 22%, ಉತ್ತರ ಕರ್ನಾಟಕದಲ್ಲಿ 21%, ಮಲೆನಾಡಲ್ಲಿ 64%, ಕರಾವಳಿಯಲ್ಲಿ 19% ರಷ್ಟು ಕಡಿಮೆ ಮಳೆಯಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

22 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

22 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

22 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

23 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

23 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

23 hours ago