Advertisement
ಪ್ರಮುಖ

#NoRain |ದೇಶವ್ಯಾಪಿ ಕ್ಷೀಣಿಸಿದ ಮುಂಗಾರು – ದಕ್ಷಿಣ ಭಾರತದ ರಾಜ್ಯಗಳೇ ಅತಿ ಹೆಚ್ಚು ಮಳೆ ಕೊರತೆ | ರಾಜ್ಯದ 25 ಜಿಲ್ಲೆಗಳಲ್ಲಿ ಕೃಪೆ ತೋರದ ವರುಣ

Share

ಸಕಾಲಕ್ಕೆ ಮಳೆ ಬಂದ್ರೆನೇ ಬೆಳೆ. ಸರಿಯಾದ ಪ್ರಮಾಣದಲ್ಲಿ ದೇಶದಲ್ಲಿ ಮಳೆ ಬಾರದೆ ಹೋದರೆ ರೈತ ಹಾಗೂ ರೈತನನ್ನು ನಂಬಿದ ಜನಕ್ಕೂ ತೊಂದರೆಯೇ. ಈ ಬಾರಿ ಮುಂಗಾರು ಅಷ್ಟಾಗಿ ಕರುಣೆ ತೋರಲಿಲ್ಲ. ಉತ್ತರ ಭಾರತದಲ್ಲಿ ಪ್ರವಾಹ ಬಂದು ಕೊಚ್ಚಿಕೊಂಡು ಹೋದರೂ, ದೇಶಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದೆ. ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯ ಪ್ರಮಾಣ ಭಾರಿ ಕಡಿಮೆಯಾಗಿದೆ.

ದೇಶವ್ಯಾಪಿ ಮುಂಗಾರು#Monsoon ಕುಂಠಿತವಾಗಿದ್ದು, ಕರ್ನಾಟಕ#Karnataka ಸೇರಿದಂತೆ 17 ರಾಜ್ಯಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ರಾಜ್ಯದಲ್ಲಿ ಜೂನ್ ತಿಂಗಳಲ್ಲಿ 25 ಜಿಲ್ಲೆಗಳ 87 ತಾಲೂಕುಗಳಲ್ಲಿ ಮಳೆ#Rain ಕೊರತೆ ಉಂಟಾಗಿದೆ. ಈ ಬಾರಿ ದಕ್ಷಿಣ ಭಾರತದ ರಾಜ್ಯಗಳೇ ಅತಿ ಹೆಚ್ಚು ಮಳೆ ಕೊರತೆ ಎದುರಿಸುತ್ತಿದೆ. ದಕ್ಷಿಣ ಭಾರತದಲ್ಲಿ 45% ರಷ್ಟು ಮುಂಗಾರಿನ ಕೊರತೆಯಾಗಿದೆ. ವಾಯುವ್ಯ ಭಾರತದ ರಾಜ್ಯಗಳನ್ನು ಹೊರತುಪಡಿಸಿದರೆ ಉಳಿದೆಲ್ಲಾ ಕಡೆ ಮುಂಗಾರು ಕೈಕೊಟ್ಟಿದೆ. ಆದರೆ ವಾಯುವ್ಯದಲ್ಲಿ ವಾಡಿಕೆಗಿಂತ 42% ರಷ್ಟು ಅಧಿಕ ಮಳೆಯಾಗಿದೆ.

ಮಧ್ಯ ಭಾರತದಲ್ಲಿ 6%, ದಕ್ಷಿಣ ಭಾರತದಲ್ಲಿ 45%, ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ 18% ರಷ್ಟು ಕಡಿಮೆ ಮಳೆಯಾಗಿದೆ. ದಕ್ಷಿಣ ರಾಜ್ಯಗಳಲ್ಲಿ ವಾಡಿಕೆಯಂತೆ 161 ಮಿ.ಮಿ ಮಳೆಯಾಗಬೇಕಿತ್ತು. ಆದರೆ ಈ ಬಾರಿ ಕೇವಲ 88 ಮಿ.ಮಿ ಮಳೆಯಷ್ಟೇ ದಾಖಲಾಗಿದೆ. ದಕ್ಷಿಣ ರಾಜ್ಯಗಳ ಪೈಕಿ ಕೇರಳದಲ್ಲಿ ಈ ಬಾರಿ 70% ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.

ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಅಭಾವ:
ಜೂನ್ 1 ರಿಂದ 29 ರವರೆಗೆ ವಾಡಿಕೆಗಿಂತ 57% ರಷ್ಟು ಕಡಿಮೆ ಮಳೆಯಾಗಿದೆ. ಜೂನ್ ತಿಂಗಳಲ್ಲಿ 25 ಜಿಲ್ಲೆಗಳ 87 ತಾಲೂಕುಗಳಲ್ಲಿ ಮಳೆ ಕೊರತೆಯುಂಟಾಗಿದೆ. ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಕೊಪ್ಪಳ, ಧಾರವಾಡ, ಶಿವಮೊಗ್ಗ, ಹಾಸನ, ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಬೆಂಗಳೂರು ನಗರ, ಗ್ರಾಮಾಂತರದಲ್ಲಿ 20% ರಷ್ಟು ಕಡಿಮೆ ಮಳೆಯಾಗಿದೆ. ದಕ್ಷಿಣ ಕರ್ನಾಟಕದಲ್ಲಿ 22%, ಉತ್ತರ ಕರ್ನಾಟಕದಲ್ಲಿ 21%, ಮಲೆನಾಡಲ್ಲಿ 64%, ಕರಾವಳಿಯಲ್ಲಿ 19% ರಷ್ಟು ಕಡಿಮೆ ಮಳೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 hour ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 hour ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

12 hours ago

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…

18 hours ago

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ

ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…

19 hours ago