Advertisement
ಪ್ರಮುಖ

#NoRain |ದೇಶವ್ಯಾಪಿ ಕ್ಷೀಣಿಸಿದ ಮುಂಗಾರು – ದಕ್ಷಿಣ ಭಾರತದ ರಾಜ್ಯಗಳೇ ಅತಿ ಹೆಚ್ಚು ಮಳೆ ಕೊರತೆ | ರಾಜ್ಯದ 25 ಜಿಲ್ಲೆಗಳಲ್ಲಿ ಕೃಪೆ ತೋರದ ವರುಣ

Share

ಸಕಾಲಕ್ಕೆ ಮಳೆ ಬಂದ್ರೆನೇ ಬೆಳೆ. ಸರಿಯಾದ ಪ್ರಮಾಣದಲ್ಲಿ ದೇಶದಲ್ಲಿ ಮಳೆ ಬಾರದೆ ಹೋದರೆ ರೈತ ಹಾಗೂ ರೈತನನ್ನು ನಂಬಿದ ಜನಕ್ಕೂ ತೊಂದರೆಯೇ. ಈ ಬಾರಿ ಮುಂಗಾರು ಅಷ್ಟಾಗಿ ಕರುಣೆ ತೋರಲಿಲ್ಲ. ಉತ್ತರ ಭಾರತದಲ್ಲಿ ಪ್ರವಾಹ ಬಂದು ಕೊಚ್ಚಿಕೊಂಡು ಹೋದರೂ, ದೇಶಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದೆ. ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯ ಪ್ರಮಾಣ ಭಾರಿ ಕಡಿಮೆಯಾಗಿದೆ.

ದೇಶವ್ಯಾಪಿ ಮುಂಗಾರು#Monsoon ಕುಂಠಿತವಾಗಿದ್ದು, ಕರ್ನಾಟಕ#Karnataka ಸೇರಿದಂತೆ 17 ರಾಜ್ಯಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ರಾಜ್ಯದಲ್ಲಿ ಜೂನ್ ತಿಂಗಳಲ್ಲಿ 25 ಜಿಲ್ಲೆಗಳ 87 ತಾಲೂಕುಗಳಲ್ಲಿ ಮಳೆ#Rain ಕೊರತೆ ಉಂಟಾಗಿದೆ. ಈ ಬಾರಿ ದಕ್ಷಿಣ ಭಾರತದ ರಾಜ್ಯಗಳೇ ಅತಿ ಹೆಚ್ಚು ಮಳೆ ಕೊರತೆ ಎದುರಿಸುತ್ತಿದೆ. ದಕ್ಷಿಣ ಭಾರತದಲ್ಲಿ 45% ರಷ್ಟು ಮುಂಗಾರಿನ ಕೊರತೆಯಾಗಿದೆ. ವಾಯುವ್ಯ ಭಾರತದ ರಾಜ್ಯಗಳನ್ನು ಹೊರತುಪಡಿಸಿದರೆ ಉಳಿದೆಲ್ಲಾ ಕಡೆ ಮುಂಗಾರು ಕೈಕೊಟ್ಟಿದೆ. ಆದರೆ ವಾಯುವ್ಯದಲ್ಲಿ ವಾಡಿಕೆಗಿಂತ 42% ರಷ್ಟು ಅಧಿಕ ಮಳೆಯಾಗಿದೆ.

ಮಧ್ಯ ಭಾರತದಲ್ಲಿ 6%, ದಕ್ಷಿಣ ಭಾರತದಲ್ಲಿ 45%, ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ 18% ರಷ್ಟು ಕಡಿಮೆ ಮಳೆಯಾಗಿದೆ. ದಕ್ಷಿಣ ರಾಜ್ಯಗಳಲ್ಲಿ ವಾಡಿಕೆಯಂತೆ 161 ಮಿ.ಮಿ ಮಳೆಯಾಗಬೇಕಿತ್ತು. ಆದರೆ ಈ ಬಾರಿ ಕೇವಲ 88 ಮಿ.ಮಿ ಮಳೆಯಷ್ಟೇ ದಾಖಲಾಗಿದೆ. ದಕ್ಷಿಣ ರಾಜ್ಯಗಳ ಪೈಕಿ ಕೇರಳದಲ್ಲಿ ಈ ಬಾರಿ 70% ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.

ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಅಭಾವ:
ಜೂನ್ 1 ರಿಂದ 29 ರವರೆಗೆ ವಾಡಿಕೆಗಿಂತ 57% ರಷ್ಟು ಕಡಿಮೆ ಮಳೆಯಾಗಿದೆ. ಜೂನ್ ತಿಂಗಳಲ್ಲಿ 25 ಜಿಲ್ಲೆಗಳ 87 ತಾಲೂಕುಗಳಲ್ಲಿ ಮಳೆ ಕೊರತೆಯುಂಟಾಗಿದೆ. ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಕೊಪ್ಪಳ, ಧಾರವಾಡ, ಶಿವಮೊಗ್ಗ, ಹಾಸನ, ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಬೆಂಗಳೂರು ನಗರ, ಗ್ರಾಮಾಂತರದಲ್ಲಿ 20% ರಷ್ಟು ಕಡಿಮೆ ಮಳೆಯಾಗಿದೆ. ದಕ್ಷಿಣ ಕರ್ನಾಟಕದಲ್ಲಿ 22%, ಉತ್ತರ ಕರ್ನಾಟಕದಲ್ಲಿ 21%, ಮಲೆನಾಡಲ್ಲಿ 64%, ಕರಾವಳಿಯಲ್ಲಿ 19% ರಷ್ಟು ಕಡಿಮೆ ಮಳೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

4 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

12 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

19 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago