Advertisement
ಪ್ರಮುಖ

#NoRain |ದೇಶವ್ಯಾಪಿ ಕ್ಷೀಣಿಸಿದ ಮುಂಗಾರು – ದಕ್ಷಿಣ ಭಾರತದ ರಾಜ್ಯಗಳೇ ಅತಿ ಹೆಚ್ಚು ಮಳೆ ಕೊರತೆ | ರಾಜ್ಯದ 25 ಜಿಲ್ಲೆಗಳಲ್ಲಿ ಕೃಪೆ ತೋರದ ವರುಣ

Share

ಸಕಾಲಕ್ಕೆ ಮಳೆ ಬಂದ್ರೆನೇ ಬೆಳೆ. ಸರಿಯಾದ ಪ್ರಮಾಣದಲ್ಲಿ ದೇಶದಲ್ಲಿ ಮಳೆ ಬಾರದೆ ಹೋದರೆ ರೈತ ಹಾಗೂ ರೈತನನ್ನು ನಂಬಿದ ಜನಕ್ಕೂ ತೊಂದರೆಯೇ. ಈ ಬಾರಿ ಮುಂಗಾರು ಅಷ್ಟಾಗಿ ಕರುಣೆ ತೋರಲಿಲ್ಲ. ಉತ್ತರ ಭಾರತದಲ್ಲಿ ಪ್ರವಾಹ ಬಂದು ಕೊಚ್ಚಿಕೊಂಡು ಹೋದರೂ, ದೇಶಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದೆ. ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯ ಪ್ರಮಾಣ ಭಾರಿ ಕಡಿಮೆಯಾಗಿದೆ.

ದೇಶವ್ಯಾಪಿ ಮುಂಗಾರು#Monsoon ಕುಂಠಿತವಾಗಿದ್ದು, ಕರ್ನಾಟಕ#Karnataka ಸೇರಿದಂತೆ 17 ರಾಜ್ಯಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ರಾಜ್ಯದಲ್ಲಿ ಜೂನ್ ತಿಂಗಳಲ್ಲಿ 25 ಜಿಲ್ಲೆಗಳ 87 ತಾಲೂಕುಗಳಲ್ಲಿ ಮಳೆ#Rain ಕೊರತೆ ಉಂಟಾಗಿದೆ. ಈ ಬಾರಿ ದಕ್ಷಿಣ ಭಾರತದ ರಾಜ್ಯಗಳೇ ಅತಿ ಹೆಚ್ಚು ಮಳೆ ಕೊರತೆ ಎದುರಿಸುತ್ತಿದೆ. ದಕ್ಷಿಣ ಭಾರತದಲ್ಲಿ 45% ರಷ್ಟು ಮುಂಗಾರಿನ ಕೊರತೆಯಾಗಿದೆ. ವಾಯುವ್ಯ ಭಾರತದ ರಾಜ್ಯಗಳನ್ನು ಹೊರತುಪಡಿಸಿದರೆ ಉಳಿದೆಲ್ಲಾ ಕಡೆ ಮುಂಗಾರು ಕೈಕೊಟ್ಟಿದೆ. ಆದರೆ ವಾಯುವ್ಯದಲ್ಲಿ ವಾಡಿಕೆಗಿಂತ 42% ರಷ್ಟು ಅಧಿಕ ಮಳೆಯಾಗಿದೆ.

ಮಧ್ಯ ಭಾರತದಲ್ಲಿ 6%, ದಕ್ಷಿಣ ಭಾರತದಲ್ಲಿ 45%, ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ 18% ರಷ್ಟು ಕಡಿಮೆ ಮಳೆಯಾಗಿದೆ. ದಕ್ಷಿಣ ರಾಜ್ಯಗಳಲ್ಲಿ ವಾಡಿಕೆಯಂತೆ 161 ಮಿ.ಮಿ ಮಳೆಯಾಗಬೇಕಿತ್ತು. ಆದರೆ ಈ ಬಾರಿ ಕೇವಲ 88 ಮಿ.ಮಿ ಮಳೆಯಷ್ಟೇ ದಾಖಲಾಗಿದೆ. ದಕ್ಷಿಣ ರಾಜ್ಯಗಳ ಪೈಕಿ ಕೇರಳದಲ್ಲಿ ಈ ಬಾರಿ 70% ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.

ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಅಭಾವ:
ಜೂನ್ 1 ರಿಂದ 29 ರವರೆಗೆ ವಾಡಿಕೆಗಿಂತ 57% ರಷ್ಟು ಕಡಿಮೆ ಮಳೆಯಾಗಿದೆ. ಜೂನ್ ತಿಂಗಳಲ್ಲಿ 25 ಜಿಲ್ಲೆಗಳ 87 ತಾಲೂಕುಗಳಲ್ಲಿ ಮಳೆ ಕೊರತೆಯುಂಟಾಗಿದೆ. ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಕೊಪ್ಪಳ, ಧಾರವಾಡ, ಶಿವಮೊಗ್ಗ, ಹಾಸನ, ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಬೆಂಗಳೂರು ನಗರ, ಗ್ರಾಮಾಂತರದಲ್ಲಿ 20% ರಷ್ಟು ಕಡಿಮೆ ಮಳೆಯಾಗಿದೆ. ದಕ್ಷಿಣ ಕರ್ನಾಟಕದಲ್ಲಿ 22%, ಉತ್ತರ ಕರ್ನಾಟಕದಲ್ಲಿ 21%, ಮಲೆನಾಡಲ್ಲಿ 64%, ಕರಾವಳಿಯಲ್ಲಿ 19% ರಷ್ಟು ಕಡಿಮೆ ಮಳೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

2 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

2 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

3 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

4 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

16 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

16 hours ago