ದುರ್ಬಲಗೊಂಡ ಮುಂಗಾರು ಪೂರ್ವ ಮಳೆ | ಮಳೆ ಕಡಿಮೆಯಾಗುತ್ತಲೇ ಮತ್ತೆ ಏರಿಕೆಯಾಗುತ್ತಿರುವ ತಾಪಮಾನ

May 28, 2024
9:12 PM

ಕಳೆದ 15 ದಿನಗಳಿಂದ ಮುಂಗಾರು ಪೂರ್ವ ಮಳೆ(Pre Mansoon rain) ಕರಾವಳಿ ಜಿಲ್ಲೆಗಳಿಗೆ(Coastal area) ಹಾಗೂ ಮಲೆನಾಡು ಭಾಗ ಸೇರಿದಂತೆ ಕೆಲವು ತಾಲೂಕುಗಳಲ್ಲಿ ಚೆನ್ನಾಗಿ ಸುರಿದಿದೆ. ಜನ ಜಾನುವಾರುಗಳು ನಿಟ್ಟುಸಿರು ಬಿಡುವಂತಾಗಿದೆ. ಆದರೆ ಕಳೆದ ಎರಡು ದಿನಗಳಿಂದ ವರುಣ ಕ್ಷೀಣಿಸುತ್ತಿದ್ದಾನೆ. ಹೀಗಾಗಿ ಮತ್ತೆ ತಾಪಮಾನ(Temperature) ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ(IMD) ತಿಳಿಸಿದೆ.

Advertisement
Advertisement

ವಿಶೇಷವಾಗಿ ಬೆಂಗಳೂರಿನಲ್ಲಿ ತಾಪಮಾನದ ಪ್ರಮಾಣವು ಹೆಚ್ಚಳವಾಗುವ ಸಾಧ್ಯತೆ ಇದೆ. ಜೊತೆಗೆ ಕರಾವಳಿ ಭಾಗದಲ್ಲೂ ಉಷ್ಣಾಂಶ ಅಧಿಕವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ರೆಮೆಲ್‌ ಚಂಡಮಾರುತ ರಾಜ್ಯಕ್ಕೆ ಹೆಚ್ಚಿನ ಪರಿಣಾಮ ಬೀರದು. ಹೀಗಾಗಿ ಮಳೆ ಕ್ಷೀಣಿಸಲಿದೆ. ಆದರೆ, ಮೇ 30ರ ನಂತರ ವಾರಾಂತ್ಯದಲ್ಲಿ ಮಳೆ ಸುರಿಯಲಿದೆ. ಅದಾಗ್ಯೂ, ಮುಂಬರುವ ವಾರದಲ್ಲಿ ಗರಿಷ್ಠ ತಾಪಮಾನವು 33 ರಿಂದ 34 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

Advertisement

ಹವಾಮಾನ ಇಲಾಖೆ ಪ್ರಕಾರ, ಮುಂದಿನ ನಾಲ್ಕು ದಿನಗಳವರೆಗೆ ಕೇರಳ ಕರಾವಳಿಯಲ್ಲಿ ಮಾನ್ಸೂನ್ ವ್ಯವಸ್ಥೆಗಳಿಲ್ಲದ ಪರಿಣಾಮವಾಗಿ ತಾಪಮಾನದ ಏರಿಳಿತ ಮತ್ತು ಲಘುವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ, ನೈರುತ್ಯ ಮುಂಗಾರು ಜೂನ್ 5 ರೊಳಗೆ ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆಯಿದೆ. ಈಗಾಗಲೇ ಪೂರ್ವ ಮುಂಗಾರು ಭರ್ಜರಿಯಾಗಿ ಸುರಿದಿದ್ದು ರಾಜ್ಯದ ಜನರು ನಿಟ್ಟುಸಿರು ಬಿಡುವಂತಾಗಿದೆ.

  • ಅಂತರ್ಜಾಲ ಮಾಹಿತಿ
ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಡ್ರಾಗನ್‌ ಫ್ರುಟ್‌ ಬೆಳೆದು ಮಾರುಕಟ್ಟೆ ಕಂಡುಕೊಂಡ ಕೃಷಿಕ | ಸಣ್ಣ ರೈತರು ಮಾರುಕಟ್ಟೆಗೆ ಚಿಂತಿಸಬೇಕಿಲ್ಲ…!
July 6, 2024
9:37 PM
by: ಮಹೇಶ್ ಪುಚ್ಚಪ್ಪಾಡಿ
ಮಳೆ ಹಿನ್ನೆಲೆಯಲ್ಲಿ ಗಿರಿಶಿಖರಗಳ ಟ್ರೆಕ್ಕಿಂಗ್ ನಿಷೇಧ | ನೀರಿಗೆ ಇಳಿಯದಂತೆ ಜಿಲ್ಲಾಧಿಕಾರಿ ಆದೇಶ |
July 6, 2024
8:18 PM
by: ದ ರೂರಲ್ ಮಿರರ್.ಕಾಂ
ಕುಸಿಯುತ್ತಿರುವ ಸೇತುವೆಗಳು ಮತ್ತು ಕಬ್ಬಿಣ ಹಾಗು ಸಿಮೆಂಟಿನ ಜಾಹೀರಾತುಗಳು…!
July 6, 2024
1:07 PM
by: ವಿವೇಕಾನಂದ ಎಚ್‌ ಕೆ
ನಿಮಗಿದು ಗೊತ್ತೇ…? | RO ಹಾಗೂ ಬಾಟಲಿ ನೀರುಗಳನ್ನು ತ್ಯಜಿಸಿ ಮನೆಯಲ್ಲಿ ಸಜೀವಗೊಳಿಸಿದ ನೀರನ್ನು ಬಳಸಿ
July 6, 2024
12:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror