MIRROR FOCUS

ದುರ್ಬಲಗೊಂಡ ಮುಂಗಾರು ಪೂರ್ವ ಮಳೆ | ಮಳೆ ಕಡಿಮೆಯಾಗುತ್ತಲೇ ಮತ್ತೆ ಏರಿಕೆಯಾಗುತ್ತಿರುವ ತಾಪಮಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ 15 ದಿನಗಳಿಂದ ಮುಂಗಾರು ಪೂರ್ವ ಮಳೆ(Pre Mansoon rain) ಕರಾವಳಿ ಜಿಲ್ಲೆಗಳಿಗೆ(Coastal area) ಹಾಗೂ ಮಲೆನಾಡು ಭಾಗ ಸೇರಿದಂತೆ ಕೆಲವು ತಾಲೂಕುಗಳಲ್ಲಿ ಚೆನ್ನಾಗಿ ಸುರಿದಿದೆ. ಜನ ಜಾನುವಾರುಗಳು ನಿಟ್ಟುಸಿರು ಬಿಡುವಂತಾಗಿದೆ. ಆದರೆ ಕಳೆದ ಎರಡು ದಿನಗಳಿಂದ ವರುಣ ಕ್ಷೀಣಿಸುತ್ತಿದ್ದಾನೆ. ಹೀಗಾಗಿ ಮತ್ತೆ ತಾಪಮಾನ(Temperature) ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ(IMD) ತಿಳಿಸಿದೆ.

Advertisement
Advertisement

ವಿಶೇಷವಾಗಿ ಬೆಂಗಳೂರಿನಲ್ಲಿ ತಾಪಮಾನದ ಪ್ರಮಾಣವು ಹೆಚ್ಚಳವಾಗುವ ಸಾಧ್ಯತೆ ಇದೆ. ಜೊತೆಗೆ ಕರಾವಳಿ ಭಾಗದಲ್ಲೂ ಉಷ್ಣಾಂಶ ಅಧಿಕವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ರೆಮೆಲ್‌ ಚಂಡಮಾರುತ ರಾಜ್ಯಕ್ಕೆ ಹೆಚ್ಚಿನ ಪರಿಣಾಮ ಬೀರದು. ಹೀಗಾಗಿ ಮಳೆ ಕ್ಷೀಣಿಸಲಿದೆ. ಆದರೆ, ಮೇ 30ರ ನಂತರ ವಾರಾಂತ್ಯದಲ್ಲಿ ಮಳೆ ಸುರಿಯಲಿದೆ. ಅದಾಗ್ಯೂ, ಮುಂಬರುವ ವಾರದಲ್ಲಿ ಗರಿಷ್ಠ ತಾಪಮಾನವು 33 ರಿಂದ 34 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಹವಾಮಾನ ಇಲಾಖೆ ಪ್ರಕಾರ, ಮುಂದಿನ ನಾಲ್ಕು ದಿನಗಳವರೆಗೆ ಕೇರಳ ಕರಾವಳಿಯಲ್ಲಿ ಮಾನ್ಸೂನ್ ವ್ಯವಸ್ಥೆಗಳಿಲ್ಲದ ಪರಿಣಾಮವಾಗಿ ತಾಪಮಾನದ ಏರಿಳಿತ ಮತ್ತು ಲಘುವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ, ನೈರುತ್ಯ ಮುಂಗಾರು ಜೂನ್ 5 ರೊಳಗೆ ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆಯಿದೆ. ಈಗಾಗಲೇ ಪೂರ್ವ ಮುಂಗಾರು ಭರ್ಜರಿಯಾಗಿ ಸುರಿದಿದ್ದು ರಾಜ್ಯದ ಜನರು ನಿಟ್ಟುಸಿರು ಬಿಡುವಂತಾಗಿದೆ.

  • ಅಂತರ್ಜಾಲ ಮಾಹಿತಿ
ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

22 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

2 days ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

2 days ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

2 days ago