ಕಳೆದ 15 ದಿನಗಳಿಂದ ಮುಂಗಾರು ಪೂರ್ವ ಮಳೆ(Pre Mansoon rain) ಕರಾವಳಿ ಜಿಲ್ಲೆಗಳಿಗೆ(Coastal area) ಹಾಗೂ ಮಲೆನಾಡು ಭಾಗ ಸೇರಿದಂತೆ ಕೆಲವು ತಾಲೂಕುಗಳಲ್ಲಿ ಚೆನ್ನಾಗಿ ಸುರಿದಿದೆ. ಜನ ಜಾನುವಾರುಗಳು ನಿಟ್ಟುಸಿರು ಬಿಡುವಂತಾಗಿದೆ. ಆದರೆ ಕಳೆದ ಎರಡು ದಿನಗಳಿಂದ ವರುಣ ಕ್ಷೀಣಿಸುತ್ತಿದ್ದಾನೆ. ಹೀಗಾಗಿ ಮತ್ತೆ ತಾಪಮಾನ(Temperature) ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ(IMD) ತಿಳಿಸಿದೆ.
ವಿಶೇಷವಾಗಿ ಬೆಂಗಳೂರಿನಲ್ಲಿ ತಾಪಮಾನದ ಪ್ರಮಾಣವು ಹೆಚ್ಚಳವಾಗುವ ಸಾಧ್ಯತೆ ಇದೆ. ಜೊತೆಗೆ ಕರಾವಳಿ ಭಾಗದಲ್ಲೂ ಉಷ್ಣಾಂಶ ಅಧಿಕವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ರೆಮೆಲ್ ಚಂಡಮಾರುತ ರಾಜ್ಯಕ್ಕೆ ಹೆಚ್ಚಿನ ಪರಿಣಾಮ ಬೀರದು. ಹೀಗಾಗಿ ಮಳೆ ಕ್ಷೀಣಿಸಲಿದೆ. ಆದರೆ, ಮೇ 30ರ ನಂತರ ವಾರಾಂತ್ಯದಲ್ಲಿ ಮಳೆ ಸುರಿಯಲಿದೆ. ಅದಾಗ್ಯೂ, ಮುಂಬರುವ ವಾರದಲ್ಲಿ ಗರಿಷ್ಠ ತಾಪಮಾನವು 33 ರಿಂದ 34 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಹವಾಮಾನ ಇಲಾಖೆ ಪ್ರಕಾರ, ಮುಂದಿನ ನಾಲ್ಕು ದಿನಗಳವರೆಗೆ ಕೇರಳ ಕರಾವಳಿಯಲ್ಲಿ ಮಾನ್ಸೂನ್ ವ್ಯವಸ್ಥೆಗಳಿಲ್ಲದ ಪರಿಣಾಮವಾಗಿ ತಾಪಮಾನದ ಏರಿಳಿತ ಮತ್ತು ಲಘುವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ, ನೈರುತ್ಯ ಮುಂಗಾರು ಜೂನ್ 5 ರೊಳಗೆ ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆಯಿದೆ. ಈಗಾಗಲೇ ಪೂರ್ವ ಮುಂಗಾರು ಭರ್ಜರಿಯಾಗಿ ಸುರಿದಿದ್ದು ರಾಜ್ಯದ ಜನರು ನಿಟ್ಟುಸಿರು ಬಿಡುವಂತಾಗಿದೆ.
ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…
ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…