ಕಳೆದ 15 ದಿನಗಳಿಂದ ಮುಂಗಾರು ಪೂರ್ವ ಮಳೆ(Pre Mansoon rain) ಕರಾವಳಿ ಜಿಲ್ಲೆಗಳಿಗೆ(Coastal area) ಹಾಗೂ ಮಲೆನಾಡು ಭಾಗ ಸೇರಿದಂತೆ ಕೆಲವು ತಾಲೂಕುಗಳಲ್ಲಿ ಚೆನ್ನಾಗಿ ಸುರಿದಿದೆ. ಜನ ಜಾನುವಾರುಗಳು ನಿಟ್ಟುಸಿರು ಬಿಡುವಂತಾಗಿದೆ. ಆದರೆ ಕಳೆದ ಎರಡು ದಿನಗಳಿಂದ ವರುಣ ಕ್ಷೀಣಿಸುತ್ತಿದ್ದಾನೆ. ಹೀಗಾಗಿ ಮತ್ತೆ ತಾಪಮಾನ(Temperature) ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ(IMD) ತಿಳಿಸಿದೆ.
ವಿಶೇಷವಾಗಿ ಬೆಂಗಳೂರಿನಲ್ಲಿ ತಾಪಮಾನದ ಪ್ರಮಾಣವು ಹೆಚ್ಚಳವಾಗುವ ಸಾಧ್ಯತೆ ಇದೆ. ಜೊತೆಗೆ ಕರಾವಳಿ ಭಾಗದಲ್ಲೂ ಉಷ್ಣಾಂಶ ಅಧಿಕವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ರೆಮೆಲ್ ಚಂಡಮಾರುತ ರಾಜ್ಯಕ್ಕೆ ಹೆಚ್ಚಿನ ಪರಿಣಾಮ ಬೀರದು. ಹೀಗಾಗಿ ಮಳೆ ಕ್ಷೀಣಿಸಲಿದೆ. ಆದರೆ, ಮೇ 30ರ ನಂತರ ವಾರಾಂತ್ಯದಲ್ಲಿ ಮಳೆ ಸುರಿಯಲಿದೆ. ಅದಾಗ್ಯೂ, ಮುಂಬರುವ ವಾರದಲ್ಲಿ ಗರಿಷ್ಠ ತಾಪಮಾನವು 33 ರಿಂದ 34 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಹವಾಮಾನ ಇಲಾಖೆ ಪ್ರಕಾರ, ಮುಂದಿನ ನಾಲ್ಕು ದಿನಗಳವರೆಗೆ ಕೇರಳ ಕರಾವಳಿಯಲ್ಲಿ ಮಾನ್ಸೂನ್ ವ್ಯವಸ್ಥೆಗಳಿಲ್ಲದ ಪರಿಣಾಮವಾಗಿ ತಾಪಮಾನದ ಏರಿಳಿತ ಮತ್ತು ಲಘುವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ, ನೈರುತ್ಯ ಮುಂಗಾರು ಜೂನ್ 5 ರೊಳಗೆ ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆಯಿದೆ. ಈಗಾಗಲೇ ಪೂರ್ವ ಮುಂಗಾರು ಭರ್ಜರಿಯಾಗಿ ಸುರಿದಿದ್ದು ರಾಜ್ಯದ ಜನರು ನಿಟ್ಟುಸಿರು ಬಿಡುವಂತಾಗಿದೆ.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…