Advertisement
MIRROR FOCUS

ದುರ್ಬಲಗೊಂಡ ಮುಂಗಾರು ಪೂರ್ವ ಮಳೆ | ಮಳೆ ಕಡಿಮೆಯಾಗುತ್ತಲೇ ಮತ್ತೆ ಏರಿಕೆಯಾಗುತ್ತಿರುವ ತಾಪಮಾನ

Share

ಕಳೆದ 15 ದಿನಗಳಿಂದ ಮುಂಗಾರು ಪೂರ್ವ ಮಳೆ(Pre Mansoon rain) ಕರಾವಳಿ ಜಿಲ್ಲೆಗಳಿಗೆ(Coastal area) ಹಾಗೂ ಮಲೆನಾಡು ಭಾಗ ಸೇರಿದಂತೆ ಕೆಲವು ತಾಲೂಕುಗಳಲ್ಲಿ ಚೆನ್ನಾಗಿ ಸುರಿದಿದೆ. ಜನ ಜಾನುವಾರುಗಳು ನಿಟ್ಟುಸಿರು ಬಿಡುವಂತಾಗಿದೆ. ಆದರೆ ಕಳೆದ ಎರಡು ದಿನಗಳಿಂದ ವರುಣ ಕ್ಷೀಣಿಸುತ್ತಿದ್ದಾನೆ. ಹೀಗಾಗಿ ಮತ್ತೆ ತಾಪಮಾನ(Temperature) ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ(IMD) ತಿಳಿಸಿದೆ.

ವಿಶೇಷವಾಗಿ ಬೆಂಗಳೂರಿನಲ್ಲಿ ತಾಪಮಾನದ ಪ್ರಮಾಣವು ಹೆಚ್ಚಳವಾಗುವ ಸಾಧ್ಯತೆ ಇದೆ. ಜೊತೆಗೆ ಕರಾವಳಿ ಭಾಗದಲ್ಲೂ ಉಷ್ಣಾಂಶ ಅಧಿಕವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ರೆಮೆಲ್‌ ಚಂಡಮಾರುತ ರಾಜ್ಯಕ್ಕೆ ಹೆಚ್ಚಿನ ಪರಿಣಾಮ ಬೀರದು. ಹೀಗಾಗಿ ಮಳೆ ಕ್ಷೀಣಿಸಲಿದೆ. ಆದರೆ, ಮೇ 30ರ ನಂತರ ವಾರಾಂತ್ಯದಲ್ಲಿ ಮಳೆ ಸುರಿಯಲಿದೆ. ಅದಾಗ್ಯೂ, ಮುಂಬರುವ ವಾರದಲ್ಲಿ ಗರಿಷ್ಠ ತಾಪಮಾನವು 33 ರಿಂದ 34 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಹವಾಮಾನ ಇಲಾಖೆ ಪ್ರಕಾರ, ಮುಂದಿನ ನಾಲ್ಕು ದಿನಗಳವರೆಗೆ ಕೇರಳ ಕರಾವಳಿಯಲ್ಲಿ ಮಾನ್ಸೂನ್ ವ್ಯವಸ್ಥೆಗಳಿಲ್ಲದ ಪರಿಣಾಮವಾಗಿ ತಾಪಮಾನದ ಏರಿಳಿತ ಮತ್ತು ಲಘುವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ, ನೈರುತ್ಯ ಮುಂಗಾರು ಜೂನ್ 5 ರೊಳಗೆ ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆಯಿದೆ. ಈಗಾಗಲೇ ಪೂರ್ವ ಮುಂಗಾರು ಭರ್ಜರಿಯಾಗಿ ಸುರಿದಿದ್ದು ರಾಜ್ಯದ ಜನರು ನಿಟ್ಟುಸಿರು ಬಿಡುವಂತಾಗಿದೆ.

  • ಅಂತರ್ಜಾಲ ಮಾಹಿತಿ
ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

7 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

7 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

7 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

8 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

20 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago