ಕಳೆದ 15 ದಿನಗಳಿಂದ ಮುಂಗಾರು ಪೂರ್ವ ಮಳೆ(Pre Mansoon rain) ಕರಾವಳಿ ಜಿಲ್ಲೆಗಳಿಗೆ(Coastal area) ಹಾಗೂ ಮಲೆನಾಡು ಭಾಗ ಸೇರಿದಂತೆ ಕೆಲವು ತಾಲೂಕುಗಳಲ್ಲಿ ಚೆನ್ನಾಗಿ ಸುರಿದಿದೆ. ಜನ ಜಾನುವಾರುಗಳು ನಿಟ್ಟುಸಿರು ಬಿಡುವಂತಾಗಿದೆ. ಆದರೆ ಕಳೆದ ಎರಡು ದಿನಗಳಿಂದ ವರುಣ ಕ್ಷೀಣಿಸುತ್ತಿದ್ದಾನೆ. ಹೀಗಾಗಿ ಮತ್ತೆ ತಾಪಮಾನ(Temperature) ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ(IMD) ತಿಳಿಸಿದೆ.
ವಿಶೇಷವಾಗಿ ಬೆಂಗಳೂರಿನಲ್ಲಿ ತಾಪಮಾನದ ಪ್ರಮಾಣವು ಹೆಚ್ಚಳವಾಗುವ ಸಾಧ್ಯತೆ ಇದೆ. ಜೊತೆಗೆ ಕರಾವಳಿ ಭಾಗದಲ್ಲೂ ಉಷ್ಣಾಂಶ ಅಧಿಕವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ರೆಮೆಲ್ ಚಂಡಮಾರುತ ರಾಜ್ಯಕ್ಕೆ ಹೆಚ್ಚಿನ ಪರಿಣಾಮ ಬೀರದು. ಹೀಗಾಗಿ ಮಳೆ ಕ್ಷೀಣಿಸಲಿದೆ. ಆದರೆ, ಮೇ 30ರ ನಂತರ ವಾರಾಂತ್ಯದಲ್ಲಿ ಮಳೆ ಸುರಿಯಲಿದೆ. ಅದಾಗ್ಯೂ, ಮುಂಬರುವ ವಾರದಲ್ಲಿ ಗರಿಷ್ಠ ತಾಪಮಾನವು 33 ರಿಂದ 34 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಹವಾಮಾನ ಇಲಾಖೆ ಪ್ರಕಾರ, ಮುಂದಿನ ನಾಲ್ಕು ದಿನಗಳವರೆಗೆ ಕೇರಳ ಕರಾವಳಿಯಲ್ಲಿ ಮಾನ್ಸೂನ್ ವ್ಯವಸ್ಥೆಗಳಿಲ್ಲದ ಪರಿಣಾಮವಾಗಿ ತಾಪಮಾನದ ಏರಿಳಿತ ಮತ್ತು ಲಘುವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ, ನೈರುತ್ಯ ಮುಂಗಾರು ಜೂನ್ 5 ರೊಳಗೆ ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆಯಿದೆ. ಈಗಾಗಲೇ ಪೂರ್ವ ಮುಂಗಾರು ಭರ್ಜರಿಯಾಗಿ ಸುರಿದಿದ್ದು ರಾಜ್ಯದ ಜನರು ನಿಟ್ಟುಸಿರು ಬಿಡುವಂತಾಗಿದೆ.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…