ಯಾಸ್‌ ಚಂಡಮಾರುತದ ಮುನ್ನವೇ ರಾಜ್ಯದಲ್ಲಿ ಮಳೆಯ ಮುನ್ನೆಚ್ಚರಿಕೆ | ಹಲವು ಜಿಲ್ಲೆಗಳಲ್ಲಿ YELLOW Alert |

May 21, 2021
8:36 PM

ಟೌಕ್ಟೇ ಚಂಡಮಾರುತದ ಬಳಿಕ ಯಾಸ್‌ ಚಂಡಮಾರುತವು ಬಂಗಾಳಕೊಲ್ಲಿಯಲ್ಲಿ  ಬಲಗೊಳ್ಳುತ್ತಿದೆ. ಮೇ.24  ರ ನಂತರ ತಮಿಳುನಾಡು, ಒರಿಸ್ಸಾದಲ್ಲಿ  ಮಳೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮುನ್ನವೇ ಕರ್ನಾಟಕದ ವಿವಿದೆಡೆ ಉತ್ತಮ ಮಳೆಯಾಗಲಿದೆ. 13 ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ ಘೋಷಣೆ ಮಾಡಲಾಗಿದೆ. ಮೇ.22 ಹಾಗೂ  23  ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೆ ಸುಳಿಗಾಳಿ ಹಾಗೂ ಹೆಚ್ಚಿನ  ತೇವಾಂಶದ ಕಾರಣದಿಂದ ಈಗ ರಾಜ್ಯದಲ್ಲಿ ಮಳೆಯಾಗುತ್ತಿದೆ.

Advertisement
Advertisement
Advertisement
Advertisement

ಶುಕ್ರವಾರ ರಾತ್ರಿಯೇ ಕರ್ನಾಟಕ, ಗೋವಾ, ತಮಿಳುನಾಡಿನ ವಿವಿದೆಡೆ  ಗುಡುಗು ಸಹಿತ ಮಳೆಯಾಗುವ ಸಾದ್ಯತೆ ಇದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರಕ್ಕೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮುಂದಿನ 24 ಗಂಟೆಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಮುಂದಿನ 48 ಗಂಟೆಗಳ ಕಾಲ ಉತ್ತಮ ಮಳೆಯಾಗಲಿದೆ. ಮೇ.24  ರ ನಂತರ ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ಉಂಟಾಗುವ ಚಂಡಮಾರುತ “ಯಾಸ್”‌ ನಿಂದ ರಾಜ್ಯದಲ್ಲಿ  ಅಷ್ಟೊಂದು ಪರಿಣಾಮ ಸದ್ಯಕ್ಕೆ ಕಂಡುಬರುತ್ತಿಲ್ಲ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror