( ಅಂತರ್ಜಾಲ ಚಿತ್ರ )
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಉಂಟಾದ “ಗುಲಾಬ್” ಚಂಡಮಾರುತ ಇದೀಗ ಭೂಮಿಗೆ ಅಪ್ಪಳಿಸುತ್ತಿದೆ. ಆಂಧ್ರಪ್ರದೇಶ, ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಕರಾವಳಿ ತೀರದಲ್ಲಿ ಭಾರೀ ಗಾಳಿ-ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಒಡಿಶಾದ ಗಂಜಮ್ ಜಿಲ್ಲೆಯಿಂದ 16,000 ಮಂದಿಯನ್ನು ಸ್ಥಳಾಂತರಿಸಲಾಗಿದೆ.
ಸದ್ಯ ಚಂಡಮಾರುತವು ಆಂಧ್ರಪ್ರದೇಶದ ಶ್ರೀಲಕುಲಂ , ಕಳಿಂಗಪಟ್ಟಣದಲ್ಲಿ ಭಾರೀ ಮಳೆಯಾಗಿದ್ದು, ಭಾರೀ ಗಾಳಿ ಬೀಸಿದೆ. ಇತ್ತೀಚೆಗಿನ ಅಂದಾಜು ಪ್ರಕಾರ ಚಂಡಮಾರುತವು ಕರಾವಳಿ ಪ್ರದೇಶಗಳನ್ನು ತಲುಪಿದೆ. ಹೀಗಾಗಿ ಆಂಧ್ರಪ್ರದೇಶದ ಉತ್ತರ ಕರಾವಳಿ ಮತ್ತು ಪಕ್ಕದ ದಕ್ಷಿಣ ಕರಾವಳಿಯ ಒಡಿಶಾದಲ್ಲಿ ಚಂಡಮಾರುತದ ವೇಗದ ಪ್ರಕ್ರಿಯೆ ಆರಂಭವಾಗಿದೆ. ಉತ್ತರ ಆಂಧ್ರಪ್ರದೇಶ-ದಕ್ಷಿಣ ಒಡಿಶಾ ಕರಾವಳಿಯ ಕಳಿಂಗಪಟ್ಟಣ ಮತ್ತು ಗೋಪಾಲಪುರ ನಡುವೆ ಮುಂದೆ ಹಾದುಹೋಗುವ ಸಾಧ್ಯತೆಯಿದೆ, ಕಳಿಂಗಪಟ್ಟಣದ ಉತ್ತರಕ್ಕೆ ಸುಮಾರು 25 ಕಿಮೀ ದೂರದಲ್ಲಿ ಚಂಡಮಾರುತವು 75-85 ಕಿಮೀ ವೇಗದಲ್ಲಿ ಮುಂದಿನ 3 ಗಂಟೆಗಳಲ್ಲಿ ಚಲಿಸಲಿದೆ.
ಪ್ರಸ್ತುತ ಒಡಿಶಾದಲ್ಲಿ ಒಟ್ಟು 13 ರಾಷ್ಟ್ರೀಯ ವಿಪತ್ತು ನಿಗ್ರಹ ದಳವನ್ನು (ಎನ್ಡಿಆರ್ಎಫ್) ಹಾಗೂ ಆಂಧ್ರಪ್ರದೇಶದಲ್ಲಿ ಒಟ್ಟು ಐದು ಎನ್ಡಿಆರ್ಎಫ್ ಪಡೆಯನ್ನು ನಿಯೋಜನೆ ಮಾಡಲಾಗಿದೆ,” ಎಂದು ಎನ್ಡಿಆರ್ಎಫ್ನ ಮಹಾನಿರ್ದೇಶಕರು ಸತ್ಯ ನಾರಾಯಣ್ ಪ್ರಧಾನ್ ತಿಳಿಸಿದ್ದಾರೆ. ಗುಲಾಬ್ ಚಂಡಮಾರುತಕ್ಕೆ ತುತ್ತಾಗುವ ಸಾಧ್ಯತೆ ಇರುವ ಪ್ರಮುಖ ಏಳು ಜಿಲ್ಲೆಗಳಲ್ಲಿ ಈ ಸ್ಥಳಾಂತರ ಪ್ರಕ್ರಿಯೆಯನ್ನು ಮಾಡಲಾಗಿದೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…