ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜುಲೈ 14ರಿಂದ ಮಳೆಯ ತೀವ್ರತೆ ಈ ಭಾಗದಲ್ಲಿ ಕೊಂಚ ಇಳಿಮುಖವಾಗಿತ್ತು. ಇದೀಗ ಮತ್ತೆ ಬಿಸಿಲು ಮಳೆಯ ವಾತಾವರಣ ಕಂಡುಬಂದಿದೆ.
ರಾಜ್ಯದ ಉತ್ತರ ಒಳನಾಡಿನಲ್ಲಿ ನಿರೀಕ್ಷಿತ ಮಳೆಯಾಗದೇ ಅನ್ನದಾತರು ಕಂಗಾಲು ಆಗಿದ್ದಾರೆ. ಜೂನ್ ಎರಡನೇ ವಾರದಲ್ಲಿ ಸಣ್ಣ ಮಳೆಯಾಗಿದ್ದರಿಂದ ಬಿತ್ತನೆ ಮಾಡಿದ್ದ ರೈತರು ಬೆಳೆ ಒಣಗುವ ಆತಂಕದಲ್ಲಿ ಆಗಸ ನೋಡುತ್ತಿದ್ದಾರೆ. ಇದೇ ವೇಳೆ ರಾಜ್ಯದ ಮಲೆನಾಡು, ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗಿತ್ತು.
ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಅಲ್ಲಲ್ಲಿ ಚದುರಿದ ರೀತಿಯಲ್ಲಿ ಮಳೆಯಾಗಿರುವ ವರದಿಗಳು ಬರುತ್ತಿವೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ 15 ದಿನಗಳಿಂದ ಮೋಡ ಕವಿದ ವಾತಾವರಣದ ಜೊತೆ ಶೀತಗಾಳಿ ಸಹ ಆರಂಭವಾಗಿದೆ.
ನಿರೀಕ್ಷಿತ ಮಳೆಯಾಗದೆ ಬಹುತೇಕ ಜಿಲ್ಲೆಗಳ ರೈತರು ಕಂಗಾಲಾಗಿದ್ದಾರೆ. ಮಳೆಯಾಗದೇ ಇದ್ದರೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರಲಿದೆ.
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…