#PMFBY | ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆ ವಿಮೆ | ಜು.31 ಪ್ರೀಮಿಯಂ ತುಂಬಲು ಕೊನೆಯ ದಿನ | ಈಗ FRUIT ID ಗೊಂದಲ…! | ವಿಮೆ ಪಾವತಿ ಕೊನೆಯ ದಿನ ಮುಂದೂಡಬಹುದೇ ?

July 27, 2023
8:29 PM
ಅಡಿಕೆ ಬೆಳೆಗಾರರಿಗೆ ಬೆಳೆ ವಿಮೆ ಪಾವತಿಗೆ ಪಹಣಿಯಲ್ಲಿ ಹೆಸರು ಇರುವ ಎಲ್ಲರ ಫಾಮರ್‌ ಐಡಿ ಕಡ್ಡಾಯವಾಗಿದೆ. ಆದರೆ ಕೆಲವು ಕೃಷಿಕರಿಗೆ ಈ ಐಡಿ ಇಲ್ಲದ ಕಾರಣದಿಂದ ಅನೇಕ ಕೃಷಿಕರಿಗೆ ಬೆಳೆ ವಿಮೆ ಕಟ್ಟಲು ಸಾಧ್ಯವಾಗುತ್ತಿಲ್ಲ. ವಿಮೆ ಕಂತು ಕಟ್ಟಲು ಜುಲೈ 31 ಕೊನೇ ದಿನವಾಗಿದೆ. ಹೀಗಾಗಿ ಈಗ ಗೊಂದಲ ಉಂಟಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ವಿವಿಧ ಕಾರಣಗಳಿಂದ ತಡವಾಗಿ ಹವಾಮಾನ ಆಧಾರಿತ ಬೆಳೆ ವಿಮೆಗೆ ಪ್ರೀಮಿಯಂ ಪಾವತಿಗೆ ನೋಟಿಫೀಕೇಶನ್‌ ಆಗಿತ್ತು. ಕೇವಲ ಒಂದು ವಾರದ ಅವಕಾಶ ಇದೆ. ಪ್ರೀಮಿಯಂ ಪಾವತಿಗೆ ಜು.31 ಕೊನೆಯ ದಿನವಾಗಿದೆ. ಈ ಬಾರಿ FID ( FRUIT ID) ಕಡ್ಡಾಯವಾಗಿದೆ. ಹಲವು ಕೃಷಿಕರಿಗೆ ಈ ಐಡಿ ಆಗದೇ ಇರುವುದು  ಈಗ ಸಮಸ್ಯೆಯಾಗಿದೆ.

Advertisement

ಈ ಬಾರಿ ಬೆಳೆ ವಿಮೆ ಪಾವತಿಗೆ FRUIT ID ಕಡ್ಡಾಯವಾಗಿದೆ.ಆದರೆ ಕೆಲವು ಕೃಷಿಕರಿಗೆ ಈ ಐಡಿ ಇಲ್ಲದ ಕಾರಣದಿಂದ ಅನೇಕ ಕೃಷಿಕರಿಗೆ ಬೆಳೆ ವಿಮೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಆದರೆ ವಿಮೆ ಕಂತು ಕಟ್ಟಲು ಜುಲೈ 31 ಕೊನೇ ದಿನವಾಗಿದೆ. ಹೀಗಾಗಿ ಈಗ ಗೊಂದಲ ಉಂಟಾಗಿದೆ.

ಈ ಬಾರಿ ಪಹಣಿಯಲ್ಲಿ  ಹೆಸರು ಇರುವ ಎಲ್ಲರದೂ ದಾಖಲೆ ಪತ್ರಗಳು ಬೇಕಿದೆ. ಅದರ ಜೊತೆಗೇ FRUIT ID ಕೂಡಾ ಕಡ್ಡಾಯವಾಗಿದೆ. ಗ್ರಾಮೀಣ ಭಾಗದಲ್ಲಿ, ಕೃಷಿಕರಲ್ಲಿ ಪಹಣಿಯಲ್ಲಿ ಹೆಸರು ಇರುವ ಎಲ್ಲರದೂ ಈ ಐಡಿ (ಫಾಮರ್‌ ಐಡಿ)ಯನ್ನು ಮಾಡಿಸಿರಲಿಲ್ಲ. ಈಗ ಬೆಳೆ ವಿಮೆಗಾಗಿ ಈ ಐಡಿ ರಚನೆಗೆ ಇಲಾಖೆಗೆ ಹೋದರೂ ತಕ್ಷಣವೇ ಈ ಐಡಿ ಸಾಧ್ಯವಾಗುತ್ತಿಲ್ಲ. ಇದೆಲ್ಲವೂ ಜು.31 ರೊಳಗೆ ಕಷ್ಟವಿದೆ.

ಇದಕ್ಕಾಗಿ ಬೆಳೆವಿಮೆ ಪಾವತಿಯ ದಿನವನ್ನು ಮುಂದೂಡುವ ಅಗತ್ಯ ಇದೆ. ಅದರ ಜೊತೆಗೆ ಸರಳೀಕರಣದ ಜೊತೆಗೆ ಬೆಳೆವಿಮೆ ಪಾವತಿಗೆ ಅವಕಾಶ ನೀಡಬೇಕಾದ ಅಗತ್ಯ ಇದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |
May 6, 2025
7:18 AM
by: ದ ರೂರಲ್ ಮಿರರ್.ಕಾಂ
ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ
May 6, 2025
7:02 AM
by: The Rural Mirror ಸುದ್ದಿಜಾಲ
ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group