#PMFBY | ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆ ವಿಮೆ | ಜು.31 ಪ್ರೀಮಿಯಂ ತುಂಬಲು ಕೊನೆಯ ದಿನ | ಈಗ FRUIT ID ಗೊಂದಲ…! | ವಿಮೆ ಪಾವತಿ ಕೊನೆಯ ದಿನ ಮುಂದೂಡಬಹುದೇ ?

July 27, 2023
8:29 PM
ಅಡಿಕೆ ಬೆಳೆಗಾರರಿಗೆ ಬೆಳೆ ವಿಮೆ ಪಾವತಿಗೆ ಪಹಣಿಯಲ್ಲಿ ಹೆಸರು ಇರುವ ಎಲ್ಲರ ಫಾಮರ್‌ ಐಡಿ ಕಡ್ಡಾಯವಾಗಿದೆ. ಆದರೆ ಕೆಲವು ಕೃಷಿಕರಿಗೆ ಈ ಐಡಿ ಇಲ್ಲದ ಕಾರಣದಿಂದ ಅನೇಕ ಕೃಷಿಕರಿಗೆ ಬೆಳೆ ವಿಮೆ ಕಟ್ಟಲು ಸಾಧ್ಯವಾಗುತ್ತಿಲ್ಲ. ವಿಮೆ ಕಂತು ಕಟ್ಟಲು ಜುಲೈ 31 ಕೊನೇ ದಿನವಾಗಿದೆ. ಹೀಗಾಗಿ ಈಗ ಗೊಂದಲ ಉಂಟಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ವಿವಿಧ ಕಾರಣಗಳಿಂದ ತಡವಾಗಿ ಹವಾಮಾನ ಆಧಾರಿತ ಬೆಳೆ ವಿಮೆಗೆ ಪ್ರೀಮಿಯಂ ಪಾವತಿಗೆ ನೋಟಿಫೀಕೇಶನ್‌ ಆಗಿತ್ತು. ಕೇವಲ ಒಂದು ವಾರದ ಅವಕಾಶ ಇದೆ. ಪ್ರೀಮಿಯಂ ಪಾವತಿಗೆ ಜು.31 ಕೊನೆಯ ದಿನವಾಗಿದೆ. ಈ ಬಾರಿ FID ( FRUIT ID) ಕಡ್ಡಾಯವಾಗಿದೆ. ಹಲವು ಕೃಷಿಕರಿಗೆ ಈ ಐಡಿ ಆಗದೇ ಇರುವುದು  ಈಗ ಸಮಸ್ಯೆಯಾಗಿದೆ.

ಈ ಬಾರಿ ಬೆಳೆ ವಿಮೆ ಪಾವತಿಗೆ FRUIT ID ಕಡ್ಡಾಯವಾಗಿದೆ.ಆದರೆ ಕೆಲವು ಕೃಷಿಕರಿಗೆ ಈ ಐಡಿ ಇಲ್ಲದ ಕಾರಣದಿಂದ ಅನೇಕ ಕೃಷಿಕರಿಗೆ ಬೆಳೆ ವಿಮೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಆದರೆ ವಿಮೆ ಕಂತು ಕಟ್ಟಲು ಜುಲೈ 31 ಕೊನೇ ದಿನವಾಗಿದೆ. ಹೀಗಾಗಿ ಈಗ ಗೊಂದಲ ಉಂಟಾಗಿದೆ.

ಈ ಬಾರಿ ಪಹಣಿಯಲ್ಲಿ  ಹೆಸರು ಇರುವ ಎಲ್ಲರದೂ ದಾಖಲೆ ಪತ್ರಗಳು ಬೇಕಿದೆ. ಅದರ ಜೊತೆಗೇ FRUIT ID ಕೂಡಾ ಕಡ್ಡಾಯವಾಗಿದೆ. ಗ್ರಾಮೀಣ ಭಾಗದಲ್ಲಿ, ಕೃಷಿಕರಲ್ಲಿ ಪಹಣಿಯಲ್ಲಿ ಹೆಸರು ಇರುವ ಎಲ್ಲರದೂ ಈ ಐಡಿ (ಫಾಮರ್‌ ಐಡಿ)ಯನ್ನು ಮಾಡಿಸಿರಲಿಲ್ಲ. ಈಗ ಬೆಳೆ ವಿಮೆಗಾಗಿ ಈ ಐಡಿ ರಚನೆಗೆ ಇಲಾಖೆಗೆ ಹೋದರೂ ತಕ್ಷಣವೇ ಈ ಐಡಿ ಸಾಧ್ಯವಾಗುತ್ತಿಲ್ಲ. ಇದೆಲ್ಲವೂ ಜು.31 ರೊಳಗೆ ಕಷ್ಟವಿದೆ.

ಇದಕ್ಕಾಗಿ ಬೆಳೆವಿಮೆ ಪಾವತಿಯ ದಿನವನ್ನು ಮುಂದೂಡುವ ಅಗತ್ಯ ಇದೆ. ಅದರ ಜೊತೆಗೆ ಸರಳೀಕರಣದ ಜೊತೆಗೆ ಬೆಳೆವಿಮೆ ಪಾವತಿಗೆ ಅವಕಾಶ ನೀಡಬೇಕಾದ ಅಗತ್ಯ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ
July 31, 2026
9:21 PM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
July 31, 2026
8:18 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?
July 31, 2026
6:08 PM
by: ಸಾಯಿಶೇಖರ್ ಕರಿಕಳ
ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು
July 31, 2026
5:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror