Advertisement
ಸುದ್ದಿಗಳು

#PMFBY | ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆ ವಿಮೆ | ಜು.31 ಪ್ರೀಮಿಯಂ ತುಂಬಲು ಕೊನೆಯ ದಿನ | ಈಗ FRUIT ID ಗೊಂದಲ…! | ವಿಮೆ ಪಾವತಿ ಕೊನೆಯ ದಿನ ಮುಂದೂಡಬಹುದೇ ?

Share

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ವಿವಿಧ ಕಾರಣಗಳಿಂದ ತಡವಾಗಿ ಹವಾಮಾನ ಆಧಾರಿತ ಬೆಳೆ ವಿಮೆಗೆ ಪ್ರೀಮಿಯಂ ಪಾವತಿಗೆ ನೋಟಿಫೀಕೇಶನ್‌ ಆಗಿತ್ತು. ಕೇವಲ ಒಂದು ವಾರದ ಅವಕಾಶ ಇದೆ. ಪ್ರೀಮಿಯಂ ಪಾವತಿಗೆ ಜು.31 ಕೊನೆಯ ದಿನವಾಗಿದೆ. ಈ ಬಾರಿ FID ( FRUIT ID) ಕಡ್ಡಾಯವಾಗಿದೆ. ಹಲವು ಕೃಷಿಕರಿಗೆ ಈ ಐಡಿ ಆಗದೇ ಇರುವುದು  ಈಗ ಸಮಸ್ಯೆಯಾಗಿದೆ.

ಈ ಬಾರಿ ಬೆಳೆ ವಿಮೆ ಪಾವತಿಗೆ FRUIT ID ಕಡ್ಡಾಯವಾಗಿದೆ.ಆದರೆ ಕೆಲವು ಕೃಷಿಕರಿಗೆ ಈ ಐಡಿ ಇಲ್ಲದ ಕಾರಣದಿಂದ ಅನೇಕ ಕೃಷಿಕರಿಗೆ ಬೆಳೆ ವಿಮೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಆದರೆ ವಿಮೆ ಕಂತು ಕಟ್ಟಲು ಜುಲೈ 31 ಕೊನೇ ದಿನವಾಗಿದೆ. ಹೀಗಾಗಿ ಈಗ ಗೊಂದಲ ಉಂಟಾಗಿದೆ.

ಈ ಬಾರಿ ಪಹಣಿಯಲ್ಲಿ  ಹೆಸರು ಇರುವ ಎಲ್ಲರದೂ ದಾಖಲೆ ಪತ್ರಗಳು ಬೇಕಿದೆ. ಅದರ ಜೊತೆಗೇ FRUIT ID ಕೂಡಾ ಕಡ್ಡಾಯವಾಗಿದೆ. ಗ್ರಾಮೀಣ ಭಾಗದಲ್ಲಿ, ಕೃಷಿಕರಲ್ಲಿ ಪಹಣಿಯಲ್ಲಿ ಹೆಸರು ಇರುವ ಎಲ್ಲರದೂ ಈ ಐಡಿ (ಫಾಮರ್‌ ಐಡಿ)ಯನ್ನು ಮಾಡಿಸಿರಲಿಲ್ಲ. ಈಗ ಬೆಳೆ ವಿಮೆಗಾಗಿ ಈ ಐಡಿ ರಚನೆಗೆ ಇಲಾಖೆಗೆ ಹೋದರೂ ತಕ್ಷಣವೇ ಈ ಐಡಿ ಸಾಧ್ಯವಾಗುತ್ತಿಲ್ಲ. ಇದೆಲ್ಲವೂ ಜು.31 ರೊಳಗೆ ಕಷ್ಟವಿದೆ.

ಇದಕ್ಕಾಗಿ ಬೆಳೆವಿಮೆ ಪಾವತಿಯ ದಿನವನ್ನು ಮುಂದೂಡುವ ಅಗತ್ಯ ಇದೆ. ಅದರ ಜೊತೆಗೆ ಸರಳೀಕರಣದ ಜೊತೆಗೆ ಬೆಳೆವಿಮೆ ಪಾವತಿಗೆ ಅವಕಾಶ ನೀಡಬೇಕಾದ ಅಗತ್ಯ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

3 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

4 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

5 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

6 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

19 hours ago