ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ವಿವಿಧ ಕಾರಣಗಳಿಂದ ತಡವಾಗಿ ಹವಾಮಾನ ಆಧಾರಿತ ಬೆಳೆ ವಿಮೆಗೆ ಪ್ರೀಮಿಯಂ ಪಾವತಿಗೆ ನೋಟಿಫೀಕೇಶನ್ ಆಗಿತ್ತು. ಕೇವಲ ಒಂದು ವಾರದ ಅವಕಾಶ ಇದೆ. ಪ್ರೀಮಿಯಂ ಪಾವತಿಗೆ ಜು.31 ಕೊನೆಯ ದಿನವಾಗಿದೆ. ಈ ಬಾರಿ FID ( FRUIT ID) ಕಡ್ಡಾಯವಾಗಿದೆ. ಹಲವು ಕೃಷಿಕರಿಗೆ ಈ ಐಡಿ ಆಗದೇ ಇರುವುದು ಈಗ ಸಮಸ್ಯೆಯಾಗಿದೆ.
ಈ ಬಾರಿ ಬೆಳೆ ವಿಮೆ ಪಾವತಿಗೆ FRUIT ID ಕಡ್ಡಾಯವಾಗಿದೆ.ಆದರೆ ಕೆಲವು ಕೃಷಿಕರಿಗೆ ಈ ಐಡಿ ಇಲ್ಲದ ಕಾರಣದಿಂದ ಅನೇಕ ಕೃಷಿಕರಿಗೆ ಬೆಳೆ ವಿಮೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಆದರೆ ವಿಮೆ ಕಂತು ಕಟ್ಟಲು ಜುಲೈ 31 ಕೊನೇ ದಿನವಾಗಿದೆ. ಹೀಗಾಗಿ ಈಗ ಗೊಂದಲ ಉಂಟಾಗಿದೆ.
ಈ ಬಾರಿ ಪಹಣಿಯಲ್ಲಿ ಹೆಸರು ಇರುವ ಎಲ್ಲರದೂ ದಾಖಲೆ ಪತ್ರಗಳು ಬೇಕಿದೆ. ಅದರ ಜೊತೆಗೇ FRUIT ID ಕೂಡಾ ಕಡ್ಡಾಯವಾಗಿದೆ. ಗ್ರಾಮೀಣ ಭಾಗದಲ್ಲಿ, ಕೃಷಿಕರಲ್ಲಿ ಪಹಣಿಯಲ್ಲಿ ಹೆಸರು ಇರುವ ಎಲ್ಲರದೂ ಈ ಐಡಿ (ಫಾಮರ್ ಐಡಿ)ಯನ್ನು ಮಾಡಿಸಿರಲಿಲ್ಲ. ಈಗ ಬೆಳೆ ವಿಮೆಗಾಗಿ ಈ ಐಡಿ ರಚನೆಗೆ ಇಲಾಖೆಗೆ ಹೋದರೂ ತಕ್ಷಣವೇ ಈ ಐಡಿ ಸಾಧ್ಯವಾಗುತ್ತಿಲ್ಲ. ಇದೆಲ್ಲವೂ ಜು.31 ರೊಳಗೆ ಕಷ್ಟವಿದೆ.
ಇದಕ್ಕಾಗಿ ಬೆಳೆವಿಮೆ ಪಾವತಿಯ ದಿನವನ್ನು ಮುಂದೂಡುವ ಅಗತ್ಯ ಇದೆ. ಅದರ ಜೊತೆಗೆ ಸರಳೀಕರಣದ ಜೊತೆಗೆ ಬೆಳೆವಿಮೆ ಪಾವತಿಗೆ ಅವಕಾಶ ನೀಡಬೇಕಾದ ಅಗತ್ಯ ಇದೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…