MIRROR FOCUS

ದೇಶದ ಹವಾಮಾನ ಪರಿಸ್ಥಿತಿ | ಕೇರಳದಲ್ಲಿ ಹೀಟ್‌ ಎಲರ್ಟ್‌ | ಉತ್ತರಾಖಂಡಕ್ಕೆ ರೆಡ್ ಅಲರ್ಟ್ | ದೆಹಲಿಯಲ್ಲಿ ಕನಿಷ್ಟ ತಾಪಮಾನ | ಉತ್ತರ ಕರ್ನಾಟಕದಲ್ಲಿ ಹೀಟ್‌ ವೇವ್ ಎಚ್ಚರಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದಲ್ಲಿ ವಿವಿದೆಡೆ ಒಂದೊಂದು ಹವಾಮಾನ ಸಮಸ್ಯೆ ತಂದೊಡ್ಡುತ್ತಿದೆ. ಹವಾಮಾನ ವೈಪರೀತ್ಯ ಹಲವು ಕಡೆ ಕಾಡುತ್ತಿದೆ. ಭಾರತ ಹವಾಮಾನ ಇಲಾಖೆಯ  ಹವಾಮಾನ ಬುಲೆಟಿನ್ ಪ್ರಕಾರ ಮಾರ್ಚ್ 19 ರವರೆಗೆ ದೇಶದ ಹಲವು ಭಾಗಗಳಲ್ಲಿ ಹಿಮಪಾತ, ಮಳೆ, ಗುಡುಗು ಮತ್ತು ಆಲಿಕಲ್ಲು ಮಳೆಯ ಎಚ್ಚರಿಕೆಗಳನ್ನು ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳಲ್ಲಿ ಕೇರಳ, ಮಾಹೆ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಬಿಸಿ ಮತ್ತು ಒಣ ಹವೆ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಭಾನುವಾರದವರೆಗೆ ಕೇರಳದ ಒಂಬತ್ತು ಜಿಲ್ಲೆಗಳಲ್ಲಿ ಹೀಟ್ ಅಲರ್ಟ್ ಬಗ್ಗೆ ಎಚ್ಚರಿಸಿದೆ.ರಾಜ್ಯದಲ್ಲಿ‌ ಕೂಡಾ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಲೇ ಇದೆ. ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ ಎಚ್ಚರಿಕೆ ನೀಡಲಾಗಿದೆ.

Advertisement
Advertisement

ಭಾರತೀಯ ಹವಾಮಾನ ಇಲಾಖೆ  ಭಾನುವಾರದವರೆಗೆ ಕೇರಳದ ಒಂಬತ್ತು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನದ ಎಲ್ಲೋ ಎಚ್ಚರಿಕೆಯ ಎಲರ್ಟ್ ನೀಡಿದೆ. ಇದೇ ವೇಳೆ ದೇಶದ  ಹಲವಾರು ರಾಜ್ಯಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಹಿಮಾಚಲ ಮತ್ತು ಉತ್ತರಾಖಂಡಕ್ಕೆ ರೆಡ್ ಅಲರ್ಟ್ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ಹಿಮಾಚಲ, ಉತ್ತರಾಖಂಡ ಮತ್ತು ಪಂಜಾಬ್, ಹರಿಯಾಣ ಮತ್ತು ದೇಶದ ಹಲವಾರು ಭಾಗಗಳ ಪಕ್ಕದ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ. ಕೆಲವು ರಾಜ್ಯಗಳಲ್ಲಿ ತಕ್ಕಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ.

ರಾಷ್ಟ್ರ ರಾಜಧಾನಿಯಲ್ಲಿ ದೆಹಲಿಯಲ್ಲಿ ನಿರಂತರ ಮಳೆಯಿಂದಾಗಿ, ದೆಹಲಿಯ ಎಲ್ಲಾ ಶಾಲೆಗಳಿಗೆ  ರಜೆ ನೀಡುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶಿಸಿದ್ದರು.

ಪುಣೆಯಲ್ಲಿ ಮಂಗಳವಾರ ತಾಪಮಾನದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ, ಶಿವಾಜಿನಗರ ಋತುವಿನ ಗರಿಷ್ಠ ಗರಿಷ್ಠ ತಾಪಮಾನ 37.3 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ. ಪುಣೆಯಲ್ಲಿ ಮಂಗಳವಾರ ತಾಪಮಾನದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ, ಮುಂದಿನ ಮೂರು ದಿನಗಳಲ್ಲಿ ನಗರವು 37 ರಿಂದ 38 ಡಿಗ್ರಿ ವರೆಗಿನ ತಾಪಮಾನಕ್ಕೆ ಸಾಕ್ಷಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದ ಮಾಹಿತಿಯ ಪ್ರಕಾರ, ಪುಣೆ ನಗರದಲ್ಲಿ ಕಳೆದ ನಾಲ್ಕೈದು ದಿನಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ.

ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 18 ರವರೆಗೆ ಬಿಸಿಲಿನ ತಾಪಮಾನದಿಂದ ದೂವಾಗಲಿ ಮಳೆಯ ಲಕ್ಷಣ ಕಾಣುತ್ತಿದೆ.ಕೋಲ್ಕತ್ತಾ ವಿಚಿತ್ರ ಹವಾಮಾನದತ್ತ ಸಾಗುತ್ತಿದೆ. ಒಡಿಶಾದ ಕೆಲವು ಭಾಗಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಗರಿಷ್ಠದಾಖಲಾಗಿದೆ.

Advertisement

ಉತ್ತರ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು ಜನ ಮನೆ ಬಿಟ್ಟು ಹೊರಬಾರದಂತ ಪರಿಸ್ಥಿತಿ ಎದುರಾಗಿದೆ. ಒಂದೆಡೆ ನೀರಿನ ಸಮಸ್ಯೆ ಮತ್ತೊಂದೆಡೆ ತಾಪಮಾನದ ಏರಿಕೆಗೆ ಜನ ತತ್ತರಿಸಿದ್ದಾರೆ. ಹೀಗಾಗಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಿಗೆ ಉಷ್ಣ ಅಲೆ ಎದುರಾಗಿದ್ದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ ಸೇರಿದಂತೆ ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಪ್ರದೇಶಗಳಲ್ಲಿ ಬಿಸಿ ಗಾಳಿ ಬೀಸಲಿದೆ(Heat Wave) ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

2 hours ago

ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?

ಜೂನ್ 22, 2025 ರಂದು  6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…

3 hours ago

ಹೊಸರುಚಿ | ಹಲಸಿನ ಕಾಯಿ ಐಸ್ ಕ್ರೀಮ್

ಐಸ್ ಕ್ರೀಮ್ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಬೇಕು. ಹಲಸಿನ ಹಣ್ಣಿನ…

3 hours ago

ಸಸ್ಯ ಪರಿಚಯ | ಕರ್ಲೆಂಕಿ

ಅಚ್ಚ ಹಸುರಿನ ಉರುಟುರುಟಾದ ರೂಪಾಯಿ ನಾಣ್ಯದಷ್ಟು ಗಾತ್ರದ ಎಲೆಗಳ ದಂಟುಗಳನ್ನು ಹೊಂದಿರುವ ಗಿಡ…

11 hours ago

ಹವಾಮಾನ ಮಾಹಿತಿ | ಈಗ ಎಲ್ಲೆಲ್ಲಾ ಭರ್ಜರಿ ಮಳೆ..? ಎಲ್ಲಿ ಕುಸಿತ..?

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ…

12 hours ago

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ | ರಾಜ್ಯದ ನದಿಗಳಿಗೆ 79 ಸಾವಿರದ 44 ಕ್ಯೂಸೆಕ್ ನೀರು

ಮಹಾರಾಷ್ಟ್ರದಲ್ಲಿ  ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ನದಿ ಪಾತ್ರಗಳಿಗೆ 79 ಸಾವಿರದ 44 ಕ್ಯೂಸೆಕ್…

12 hours ago