ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.
ಇಂದು ಬೆಂಗಳೂರು ನಗರದ ಹಲವೆಡೆ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಚಿತ್ರದುರ್ಗ, ಕೋಲಾರ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗಬಹುದು ಎಂದು ಇಲಾಖೆ ಮಾಹಿತಿ ನೀಡಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel