Advertisement
MIRROR FOCUS

ಭವಿಷ್ಯದಲ್ಲಿ ಭಾರತದ ಕೃಷಿ ಬೆಳವಣಿಗೆ ಹವಾಮಾನದ ಆಧಾರದಲ್ಲಿ | ಈ ಚುನಾವಣೆಯಲ್ಲಿ ಹವಾಮಾನ ಸ್ಥಿರತೆಯ ಬಗ್ಗೆ ಪಕ್ಷಗಳ ನಿಲುವು ಏನು ?

Share

ಭಾರತವು ಕೃಷಿ ಪ್ರಧಾನವಾದ ದೇಶ. ಇದನ್ನು ಸಣ್ಣ ತರಗತಿಯಿಂದಲೇ ಹೇಳಲಾಗಿದೆ, ಹೇಳಲಾಗುತ್ತಿದೆ. ಇಂತಹದ್ದರಲ್ಲಿ ಈಗ ಭಾರತದಲ್ಲಿ ಹವಾಮಾನ ವೈಪರೀತ್ಯ ಕೃಷಿಗೆ ಸಂಕಷ್ಟ ತಂದುಕೊಟ್ಟಿದೆ. ಹಾಗಿದ್ದರೆ ಈ ಬಾರಿಯ ಚುನಾವಣೆಯಲ್ಲಿ ಪಕ್ಷಗಳು ಹವಾಮಾನ ವೈಪರೀತ್ಯ ನಿಯಂತ್ರಣಕ್ಕೆ ಏನಾದರೂ ಮಾರ್ಗಸೂಚಿಯನ್ನು ತಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದಾರಾ…?

Advertisement

ಭಾರತದ ಕೃಷಿ ಕ್ಷೇತ್ರವು ಭವಿಷ್ಯದಲ್ಲಿ ಸಂಕಷ್ಟದ ಹಾದಿಯನ್ನು ತುಳಿಯಬೇಕಾಗಬಹುದು. ಕಾಲಕ್ಕೆ ಮಳೆಯಾಗುತ್ತಿಲ್ಲ, ಅಕಾಲದಲ್ಲಿ ಮಳೆಯಾಗುತ್ತಿದೆ. ಕೃಷಿಕರ ಸಂಕಷ್ಟ ಹೇಳತೀರದು. ಕರ್ನಾಟಕವನ್ನೇ ತೆಗೆದುಕೊಂಡರೆ ಎಲ್ಲಾ ಬೆಳೆಯೂ ಸರಿಯಾಗಿ ಬೆಳೆಯಲಾಗುತ್ತಿಲ್ಲ, ಕೆಲವು ವಾಣಿಜ್ಯ ಬೆಳೆಗಳು ವಿಪರೀತವಾಗಿ ವಿಸ್ತರಣೆಯಾಗಿದೆ. ಇವುಗಳು ಮಾರುಕಟ್ಟೆ, ಮಾರಾಟ ವ್ಯವಸ್ಥೆ  ಇದೂ ಸಂಕಷ್ಟವೇ ಆಗಿದೆ. ಅಷ್ಟೇ ಅಲ್ಲ, ಹವಾಮಾನದ ಕಾರಣದಿಂದ ನೀರಿನ ಕೊರತೆಯೂ ಎಲ್ಲೆಡೆ ಕಾಡುತ್ತಿದೆ. ಇಂತಹ ಸಂದಿಗ್ಧತೆಯ ನಡುವೆ ಕೃಷಿ ಕ್ಷೇತ್ರಕ್ಕೆ ಪಕ್ಷಗಳ ಕೊಡುಗೆಯ ಜೊತೆಗೆ ಹವಾಮಾನ ವೈಪರೀತ್ಯ ನಿಯಂತ್ರಣಕ್ಕೆ ಏನಿದೆ..?. ಭಾರತವು ಬದಲಾಗುತ್ತಿರುವ ಜಗತ್ತಿಗೆ ಹೊಂದಿಕೊಳ್ಳುತ್ತದೆಯೇ ಅಥವಾ ಸುಸ್ಥಿರ ಭವಿಷ್ಯದ ಕಡೆಗೆ ಚಳುವಳಿಯನ್ನೇ ನಡೆಸಬೇಕಾಗಿದೆಯೇ..?

ಇಂದು ಉಳಿದೆಲ್ಲಾ ಸಮಸ್ಯೆಗಳಿಗಿಂತಲೂ ಪರಿಸರದ ಸವಾಲುಗಳು ಹೆಚ್ಚಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಈ ಬಗ್ಗೆ ಚರ್ಚೆಗಳು ನಡೆದಿವೆ. ಮುಂದಿನ 10 ವರ್ಷದಲ್ಲಿ ಕೇವಲ 2 ಡಿಗ್ರಿಯಷ್ಟು ವಾತಾವರಣದ ಉಷ್ಣತೆ ಇಳಿಸಲು ಪ್ರಯತ್ನಗಳು ನಡೆಯಬೇಕು ಎಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆದಿದೆ, ಭಾರತವೂ ಇದಕ್ಕೆ ಸಮ್ಮತಿಸಿದೆ. ಇಂದು ಹೆಚ್ಚುತ್ತಿರುವ ಪರಿಸರ ಸವಾಲುಗಳ, ಹವಾಮಾನ ಬದಲಾವಣೆಯ ಸ್ಥಿತಿಗೆ ರಾಜಕೀಯ ಪಕ್ಷಗಳು ದೃಢವಾದ ಕಾರ್ಯತಂತ್ರಗಳನ್ನು ರೂಪಿಸುವ ಅನಿವಾರ್ಯತೆ ಇದೆ. ಇಂದು ಆರ್ಥಿಕ ಅಭಿವೃದ್ಧಿ, ಸಾಮಾಜಿಕ ಸಮಾನತೆ ಸೇರಿದಂತೆ ಇತರ ಎಲ್ಲಾ ನೀತಿ ನಿರ್ಧಾರಗಳ ಜೊತೆಯಲ್ಲೇ ಪರಿಸರದ ಬಗ್ಗೆ ಆಳವಾಗಿ ನೀತಿ ರೂಪಿಸುವ ಪ್ರಮುಖ ಘಟ್ಟದಲ್ಲಿ ಭಾರತ ಬಂದು ನಿಂತಿದೆ.

ಈ ಹಿನ್ನೆಲೆಯಲ್ಲಿ, ದೇಶದ ಪ್ರಮುಖ ರಾಜಕೀಯ ಪಕ್ಷಗಳ ಪ್ರಣಾಳಿಕೆಗಳೂ ಪ್ರಮುಖವಾಗಿದೆ. ವಿಜ್ಞಾನಿಗಳು, ನೀತಿ ನಿರೂಪಕರು ಮತ್ತು ನಾಗರಿಕರು ಈ ಪ್ರಣಾಳಿಕೆಗಳನ್ನು  ಪರಿಶೀಲಿಸಿದಾಗ, ಸ್ಪಷ್ಟವಾದ ಯೋಜನೆಗಳ ಕೊರತೆ ಎದ್ದು ಕಾಣುತ್ತಿದೆ. ಯಾವುದೇ ಪ್ರಣಾಳಿಕೆಯು ಹವಾಮಾನ ಬದಲಾವಣೆಯನ್ನು ಎದುರಿಸಲು ಜಿಲ್ಲಾ ಮಟ್ಟದ ಯೋಜನೆಯ ಬಗ್ಗೆ ಹೇಳಿಲ್ಲ.

ಬಿಜೆಪಿಯ ತನ್ನ ಪ್ರಣಾಳಿಕೆಯಲ್ಲಿ, ಸೋಲಾರ್‌ ಇಂಧನ ಸೇರಿದಂತೆ ನವೀಕರಿಸಬಹುದಾದ ಇಂಧನಗಳು, ನದಿ ಪುನರುಜ್ಜೀವನ ಸೇರಿದಂತೆ ವಿವಿಧ ಕ್ರಮಗಳನ್ನು ಹೇಳಿದೆ.ಕೃಷಿ ಅರಣ್ಯವನ್ನು ಉತ್ತೇಜಿಸಲು ಪಕ್ಷವು ಒತ್ತು ನೀಡುತ್ತದೆ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯು ಹವಾಮಾನ ಬದಲಾವಣೆಯನ್ನು ಪರಿಹರಿಸಲು ಮತ್ತು ಭಾರತದಲ್ಲಿ ಪರಿಸರ ಸುಸ್ಥಿರತೆಯನ್ನು ಉತ್ತೇಜಿಸುವ ಭರವಸೆ ನೀಡಿದೆ. ಹವಾಮಾನ ಬದಲಾವಣೆ ಪ್ರಾಧಿಕಾರವನ್ನು ಸ್ಥಾಪಿಸುವುದರ ಬಗ್ಗೆಯೂ ಹೇಳಿದೆ. ಎರಡೂ ಪಕ್ಷಗಳು ಗಾಳಿ ಮತ್ತು ನೀರಿನ ಗುಣಮಟ್ಟವನ್ನು ಸುಧಾರಿಸುವುದರ ಬಗ್ಗೆ ಹೇಳಿದೆ.

ವಿಶೇಷವಾಗಿ, ರಾಷ್ಟ್ರೀಯ ಶುದ್ಧ ಗಾಳಿ ಕಾರ್ಯಕ್ರಮವನ್ನು ಬಲಪಡಿಸಲು, ನದಿಗಳಿಗೆ ತ್ಯಾಜ್ಯವನ್ನು ಬಿಡುವುದನ್ನು ತಡೆಯಲು ಮತ್ತು ಕಾಡುಗಳು, ಜೀವವೈವಿಧ್ಯತೆ ಮತ್ತು ಕರಾವಳಿ ವಲಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷವು ಭರವಸೆ ನೀಡಿದೆ. ಎರಡೂ ಪಕ್ಷಗಳ ಪ್ರಣಾಳಿಕೆ ಗಮನಿಸಿದರೆ, ಕಾಂಗ್ರೆಸ್‌ ಪರಿಸರ ಸಂರಕ್ಷಣೆ ಹಾಗೂ ಹವಾಮಾನ ವೈಪರೀತ್ಯ ನಿಯಂತ್ರಣದ ಕಡೆಗೆ ಹೆಚ್ಚಿನ ಆದ್ಯತೆ ನೀಡಿದಂತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

12 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

12 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

13 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

13 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

13 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

13 hours ago