Karnataka Weather | 05-6-2024 | ಇಂದು ಹಲವು ಕಡೆ ಮಧ್ಯಾಹ್ನ ನಂತರ ಮಳೆ | ಮುಂದಿನ 10 ದಿನಗಳವರೆಗೂ ಮುಂಗಾರು ದುರ್ಬಲ ಏಕೆ..?

June 5, 2024
11:45 AM
ಜೂನ್ 6 ರಿಂದ 9ರ ತನಕ ಮುಂಗಾರು ಸ್ವಲ್ಪ ಚುರುಕಾದರೂ ಅರಬ್ಬಿ ಸಮುದ್ರದ ಪಶ್ಚಿಮ ಭಾಗದಿಂದ ಈಚೆಗೆ ಮಾರುತಗಳ ಒತ್ತಡ ಕಡಿಮೆ ಇರುವುದರಿಂದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.

06.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ವಿಜಯಪುರ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ, ಚಿತ್ರದುರ್ಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನ ಪ್ರಕಾರ ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಶಿಥಿಲಗೊಳ್ಳುತ್ತಿದೆ. ಜೂನ್ 6 ರಿಂದ 9ರ ತನಕ ಮುಂಗಾರು ಸ್ವಲ್ಪ ಚುರುಕಾದರೂ ಅರಬ್ಬಿ ಸಮುದ್ರದ ಪಶ್ಚಿಮ ಭಾಗದಿಂದ ಈಚೆಗೆ ಮಾರುತಗಳ ಒತ್ತಡ ಕಡಿಮೆ ಇರುವುದರಿಂದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಈಗ ಅರಬ್ಬಿ ಸಮುದ್ರ ದಕ್ಷಿಣ ಭಾಗದಿಂದ ಶ್ರೀಲಂಕಾ ಮೂಲಕ ಬಂಗಾಳಕೊಲ್ಲಿಗೆ ಬೀಸುತ್ತಿರುವ ಗಾಳಿಯ ಒತ್ತಡವೂ ಕಡಿಮೆಯಾಗುವ ಸೂಚನೆಗಳಿರುವುದರಿಂದ ಒಳನಾಡು ಭಾಗಗಳಲ್ಲಿಯೂ ಈಗ ಆಗುತ್ತಿರುವ ಮಳೆಯು ಇನ್ನೆರಡು ದಿನಗಳಲ್ಲಿ ಕಡಿಮೆಯಾಗುವ ಲಕ್ಷಣಗಳಿವೆ. ಒಟ್ಟಿನಲ್ಲಿ ಮುಂಗಾರು ಮುಂದಿನ 10 ದಿನಗಳವರೆಗೂ ದುರ್ಬಲವಾಗಿರಲಿದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು
June 23, 2025
7:56 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?
June 22, 2025
1:26 PM
by: ಸಾಯಿಶೇಖರ್ ಕರಿಕಳ
ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!
June 22, 2025
12:00 PM
by: The Rural Mirror ಸುದ್ದಿಜಾಲ
ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ
June 22, 2025
11:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group