Advertisement
ವೆದರ್ ಮಿರರ್

Karnataka Weather | 05-6-2024 | ಇಂದು ಹಲವು ಕಡೆ ಮಧ್ಯಾಹ್ನ ನಂತರ ಮಳೆ | ಮುಂದಿನ 10 ದಿನಗಳವರೆಗೂ ಮುಂಗಾರು ದುರ್ಬಲ ಏಕೆ..?

Share

06.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ವಿಜಯಪುರ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ, ಚಿತ್ರದುರ್ಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನ ಪ್ರಕಾರ ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಶಿಥಿಲಗೊಳ್ಳುತ್ತಿದೆ. ಜೂನ್ 6 ರಿಂದ 9ರ ತನಕ ಮುಂಗಾರು ಸ್ವಲ್ಪ ಚುರುಕಾದರೂ ಅರಬ್ಬಿ ಸಮುದ್ರದ ಪಶ್ಚಿಮ ಭಾಗದಿಂದ ಈಚೆಗೆ ಮಾರುತಗಳ ಒತ್ತಡ ಕಡಿಮೆ ಇರುವುದರಿಂದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಈಗ ಅರಬ್ಬಿ ಸಮುದ್ರ ದಕ್ಷಿಣ ಭಾಗದಿಂದ ಶ್ರೀಲಂಕಾ ಮೂಲಕ ಬಂಗಾಳಕೊಲ್ಲಿಗೆ ಬೀಸುತ್ತಿರುವ ಗಾಳಿಯ ಒತ್ತಡವೂ ಕಡಿಮೆಯಾಗುವ ಸೂಚನೆಗಳಿರುವುದರಿಂದ ಒಳನಾಡು ಭಾಗಗಳಲ್ಲಿಯೂ ಈಗ ಆಗುತ್ತಿರುವ ಮಳೆಯು ಇನ್ನೆರಡು ದಿನಗಳಲ್ಲಿ ಕಡಿಮೆಯಾಗುವ ಲಕ್ಷಣಗಳಿವೆ. ಒಟ್ಟಿನಲ್ಲಿ ಮುಂಗಾರು ಮುಂದಿನ 10 ದಿನಗಳವರೆಗೂ ದುರ್ಬಲವಾಗಿರಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

9 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago