ವೆದರ್ ಮಿರರ್

ಹವಾಮಾನ ವರದಿ | 18-10-2024 | ಅ.25ರಿಂದ ಮಳೆಯ ಕಡಿಮೆಯಾಗುವ ಲಕ್ಷಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

19.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

Advertisement

ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ ಹಾಗೂ ಸಂಜೆ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆ (ಪಶ್ಚಿಮದ ಮೋಡದಿಂದ) ಮತ್ತು ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ (ಪೂರ್ವದ ಮೋಡದಿಂದ) ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 25ರಿಂದ ಮಳೆಯ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಒಂದೆರಡು ಭಾಗಗಳಲ್ಲಿ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಯಲು ಸೀಮೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಅಕ್ಟೊಬರ್ 25ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಒಳನಾಡು : ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ ಇದ್ದರೆ, ಗದಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ (ಗುಂಡ್ಲುಪೇಟೆ ಭಾಗಗಳಲ್ಲಿ) ಮೋಡ ಅಥವಾ ಅಲ್ಲಲ್ಲಿ ತುಂತುರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸ್ವಲ್ಪ ಜಾಸ್ತಿ ಇರಬಹುದು), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

Advertisement

ಈಗಿನಂತೆ ಉತ್ತರ ಒಳನಾಡಿನಲ್ಲಿ ಅಕ್ಟೊಬರ್ 24ರಿಂದ ಹಾಗೂ ದಕ್ಷಿಣ ಒಳನಾಡುಗಳಲ್ಲಿ ಭಾಗಗಳಲ್ಲಿ ಅಕ್ಟೊಬರ್ 25ರಿಂದ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಈಗ ಉತ್ತರಕ್ಕೆ ಚಲಿಸಿದ್ದು, ಇನ್ನು ಪಶ್ಚಿಮಾಭಿಮುಖವಾಗಿ ಚಲಿಸಿ ಅಕ್ಟೊಬರ್ 22 ರಂದು ಯಮನ್ ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಅಕ್ಟೊಬರ್ 20ರಂದು ಬಂಗಾಳಕೊಲ್ಲಿಯ ಅಂಡಮಾನ್ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ ಅಕ್ಟೊಬರ್ 23ರ ನಂತರ ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಯೂ ಇದೆ. ಉತ್ತರಕ್ಕೆ ಚಲಿಸಿ ಪ್ರಭಲಗೊಂಡರೆ ಹಿಂಗಾರು ಮಾರುತಗಳು ತುಂಬಾ ದುರ್ಬಲಗೊಳ್ಳಲಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

18 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

18 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

18 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

18 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

18 hours ago