ಗುಲಾಬ್ ಚಂಡಮಾರುತದ ಬಳಿಕ ಇದೀಗ ಶಾಹೀನ್ ಚಂಡಮಾರುತ ಅಬ್ಬರಿಸುತ್ತಿದೆ. “ಶಾಹೀನ್” ಚಂಡಮಾರುತದ ಪ್ರಭಾವದಿಂದ ಬಿಹಾರ್, ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿದಂತೆ ಏಳು ರಾಜ್ಯಗಳಲ್ಲಿ ಅ.1 ಹಾಗೂ 2 ರಂದು ಹೆಚ್ಚು ಮಳೆಯಾಗಲಿದೆ. ರಾಜ್ಯದಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಗುಜರಾತ್ ಕರಾವಳಿಯಲ್ಲಿ ಶಾಹೀನ್ ಚಂಡಮಾರುತ ಪಶ್ಚಿಮ ದಿಕ್ಕಿಗೆ ಚಲಿಸಲು ಆರಂಭಿಸಿದ್ದು ಮತ್ತು ಮುಂದಿನ ಆರು ಗಂಟೆಗಳಲ್ಲಿ ಚಂಡಮಾರುತ ತೀವ್ರತೆ ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಶುಕ್ರವಾರ ಬೆಳಗ್ಗೆ ಶಾಹೀನ್ ಚಂಡಮಾರುತ ಗುಜರಾತ್ನ ದ್ವಾರಕದ ಪಶ್ಚಿಮ ವಾಯವ್ಯ ದಿಕ್ಕಿನಿಂದ ಸುಮಾರು 400 ಕಿ.ಮೀ ದೂರದಲ್ಲಿ, ಪಾಕಿಸ್ತಾನದ ಕರಾಚಿಯಿಂದ 260 ಕಿ.ಮೀ ನೈಋತ್ಯಕ್ಕೆ ಹಾಗೂ ಇರಾನ್ನ ಚಾಬಹಾರ್ ಬಂದರಿನಿಂದ 530 ಕಿ.ಮೀ ಆಗ್ನೇಯದಲ್ಲಿ ಚಲಿಸಿತ್ತು. ಇದೀಗ ಗುಜರಾತ್ ಕರಾವಳಿ ತೀರದಲ್ಲಿ ಶಾಹೀನ್ ಚಂಡಮಾರುತ ಚಲಿಸುತ್ತಿದ್ದು ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಬಹುದು.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…