ಗುಲಾಬ್ ಚಂಡಮಾರುತದ ಬಳಿಕ ಇದೀಗ ಶಾಹೀನ್ ಚಂಡಮಾರುತ ಅಬ್ಬರಿಸುತ್ತಿದೆ. “ಶಾಹೀನ್” ಚಂಡಮಾರುತದ ಪ್ರಭಾವದಿಂದ ಬಿಹಾರ್, ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿದಂತೆ ಏಳು ರಾಜ್ಯಗಳಲ್ಲಿ ಅ.1 ಹಾಗೂ 2 ರಂದು ಹೆಚ್ಚು ಮಳೆಯಾಗಲಿದೆ. ರಾಜ್ಯದಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಗುಜರಾತ್ ಕರಾವಳಿಯಲ್ಲಿ ಶಾಹೀನ್ ಚಂಡಮಾರುತ ಪಶ್ಚಿಮ ದಿಕ್ಕಿಗೆ ಚಲಿಸಲು ಆರಂಭಿಸಿದ್ದು ಮತ್ತು ಮುಂದಿನ ಆರು ಗಂಟೆಗಳಲ್ಲಿ ಚಂಡಮಾರುತ ತೀವ್ರತೆ ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಶುಕ್ರವಾರ ಬೆಳಗ್ಗೆ ಶಾಹೀನ್ ಚಂಡಮಾರುತ ಗುಜರಾತ್ನ ದ್ವಾರಕದ ಪಶ್ಚಿಮ ವಾಯವ್ಯ ದಿಕ್ಕಿನಿಂದ ಸುಮಾರು 400 ಕಿ.ಮೀ ದೂರದಲ್ಲಿ, ಪಾಕಿಸ್ತಾನದ ಕರಾಚಿಯಿಂದ 260 ಕಿ.ಮೀ ನೈಋತ್ಯಕ್ಕೆ ಹಾಗೂ ಇರಾನ್ನ ಚಾಬಹಾರ್ ಬಂದರಿನಿಂದ 530 ಕಿ.ಮೀ ಆಗ್ನೇಯದಲ್ಲಿ ಚಲಿಸಿತ್ತು. ಇದೀಗ ಗುಜರಾತ್ ಕರಾವಳಿ ತೀರದಲ್ಲಿ ಶಾಹೀನ್ ಚಂಡಮಾರುತ ಚಲಿಸುತ್ತಿದ್ದು ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಬಹುದು.
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…