ಗುಲಾಬ್ ಚಂಡಮಾರುತದ ಬಳಿಕ ಇದೀಗ ಶಾಹೀನ್ ಚಂಡಮಾರುತ ಅಬ್ಬರಿಸುತ್ತಿದೆ. “ಶಾಹೀನ್” ಚಂಡಮಾರುತದ ಪ್ರಭಾವದಿಂದ ಬಿಹಾರ್, ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿದಂತೆ ಏಳು ರಾಜ್ಯಗಳಲ್ಲಿ ಅ.1 ಹಾಗೂ 2 ರಂದು ಹೆಚ್ಚು ಮಳೆಯಾಗಲಿದೆ. ರಾಜ್ಯದಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಗುಜರಾತ್ ಕರಾವಳಿಯಲ್ಲಿ ಶಾಹೀನ್ ಚಂಡಮಾರುತ ಪಶ್ಚಿಮ ದಿಕ್ಕಿಗೆ ಚಲಿಸಲು ಆರಂಭಿಸಿದ್ದು ಮತ್ತು ಮುಂದಿನ ಆರು ಗಂಟೆಗಳಲ್ಲಿ ಚಂಡಮಾರುತ ತೀವ್ರತೆ ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಶುಕ್ರವಾರ ಬೆಳಗ್ಗೆ ಶಾಹೀನ್ ಚಂಡಮಾರುತ ಗುಜರಾತ್ನ ದ್ವಾರಕದ ಪಶ್ಚಿಮ ವಾಯವ್ಯ ದಿಕ್ಕಿನಿಂದ ಸುಮಾರು 400 ಕಿ.ಮೀ ದೂರದಲ್ಲಿ, ಪಾಕಿಸ್ತಾನದ ಕರಾಚಿಯಿಂದ 260 ಕಿ.ಮೀ ನೈಋತ್ಯಕ್ಕೆ ಹಾಗೂ ಇರಾನ್ನ ಚಾಬಹಾರ್ ಬಂದರಿನಿಂದ 530 ಕಿ.ಮೀ ಆಗ್ನೇಯದಲ್ಲಿ ಚಲಿಸಿತ್ತು. ಇದೀಗ ಗುಜರಾತ್ ಕರಾವಳಿ ತೀರದಲ್ಲಿ ಶಾಹೀನ್ ಚಂಡಮಾರುತ ಚಲಿಸುತ್ತಿದ್ದು ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಬಹುದು.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…