ಗುಲಾಬ್ ಚಂಡಮಾರುತದ ಬಳಿಕ ಇದೀಗ ಶಾಹೀನ್ ಚಂಡಮಾರುತ ಅಬ್ಬರಿಸುತ್ತಿದೆ. “ಶಾಹೀನ್” ಚಂಡಮಾರುತದ ಪ್ರಭಾವದಿಂದ ಬಿಹಾರ್, ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿದಂತೆ ಏಳು ರಾಜ್ಯಗಳಲ್ಲಿ ಅ.1 ಹಾಗೂ 2 ರಂದು ಹೆಚ್ಚು ಮಳೆಯಾಗಲಿದೆ. ರಾಜ್ಯದಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಗುಜರಾತ್ ಕರಾವಳಿಯಲ್ಲಿ ಶಾಹೀನ್ ಚಂಡಮಾರುತ ಪಶ್ಚಿಮ ದಿಕ್ಕಿಗೆ ಚಲಿಸಲು ಆರಂಭಿಸಿದ್ದು ಮತ್ತು ಮುಂದಿನ ಆರು ಗಂಟೆಗಳಲ್ಲಿ ಚಂಡಮಾರುತ ತೀವ್ರತೆ ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಶುಕ್ರವಾರ ಬೆಳಗ್ಗೆ ಶಾಹೀನ್ ಚಂಡಮಾರುತ ಗುಜರಾತ್ನ ದ್ವಾರಕದ ಪಶ್ಚಿಮ ವಾಯವ್ಯ ದಿಕ್ಕಿನಿಂದ ಸುಮಾರು 400 ಕಿ.ಮೀ ದೂರದಲ್ಲಿ, ಪಾಕಿಸ್ತಾನದ ಕರಾಚಿಯಿಂದ 260 ಕಿ.ಮೀ ನೈಋತ್ಯಕ್ಕೆ ಹಾಗೂ ಇರಾನ್ನ ಚಾಬಹಾರ್ ಬಂದರಿನಿಂದ 530 ಕಿ.ಮೀ ಆಗ್ನೇಯದಲ್ಲಿ ಚಲಿಸಿತ್ತು. ಇದೀಗ ಗುಜರಾತ್ ಕರಾವಳಿ ತೀರದಲ್ಲಿ ಶಾಹೀನ್ ಚಂಡಮಾರುತ ಚಲಿಸುತ್ತಿದ್ದು ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಬಹುದು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…