10.10.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಸಹ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಮಂಡ್ಯ, ಚಾಮರಾಜನಗರ, ಬೆಂಗಳೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ(ಒಂದೆರಡು ಕಡೆ), ದಾವಣಗೆರೆ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಗುಲ್ಬರ್ಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ :
ಮುಂಗಾರು ದುರ್ಬಲವಾಗದ್ದರೂ ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ಚಲನೆ ಪ್ರಾರಂಭವಾಗಿದೆ.
13ನೇ ತಾರೀಕಿನ ವೇಳೆಗೆ ಈ ವಾಯುಭಾರ ಕುಸಿತವು ಸ್ವಲ್ಪ ಪ್ರಭಲವಾಗುವ ಸಾಧ್ಯತೆ ಇದೆ ಹಾಗೂ ಅದೇ ವೇಳೆಗೆ ಕರಾವಳಿ ಬಂಗಾಳ ಕೊಲ್ಲಿಯಲ್ಲೂ ವಾಯುಭಾರ ಕುಸಿತ ಉಂಟಾಗುವ ಮುನ್ಸೂಚನೆ ಇದೆ.ಕರ್ನಾಟಕ ಕರಾವಳಿ ಭಾಗಗಳಿಗೆ ಅಷ್ಟೇನೂ ಪ್ರಭಾವ ಇಲ್ಲದಿದ್ದರೂ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…