ವೆದರ್‌ ಮಿರರ್‌ :16-10-2021 | ವಾಯುಭಾರ ಕುಸಿತದ ಪರಿಣಾಮ – ವಿವಿದೆಡೆ ಮಳೆ ಸಾಧ್ಯತೆ |

October 16, 2021
11:06 AM

17.10.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಸಂಜೆ ಮಳೆಯ ಮುನ್ಸೂಚನೆ ಇದೆ.
ಆಗುಂಬೆ, ಮೂಡಿಗೆರೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಹ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಡುಪಿ ಸಂಜೆಯ ಹೊತ್ತಿಗೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.

ವಾಯುಭಾರ ಕುಸಿತವು ಮಧ್ಯ ಕೇರಳ ತೀರ ತಲುಪಿದ್ದು, ಪರಿಣಾಮವಾಗಿ ಕೊಡಗು, ಮೈಸೂರು, ಮಂಡ್ಯ ಚಾಮರಾಜನಗರ, ರಾಮನಗರ, ಬೆಂಗಳೂರು(ದಕ್ಷಿಣ ಭಾಗ), ಕೋಲಾರ (ದಕ್ಷಿಣ ಭಾಗ) ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ಉತ್ತರ ಆಂದ್ರಾ ಕರಾವಳಿಯಲ್ಲಿ ಶಿಥಿಲಗೊಳ್ಳುತ್ತಿದ್ದು ಪರಿಣಾಮವಾಗಿ ಕಲಬುರ್ಗಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ರಾಯಚೂರು, ಕೊಪ್ಪಳ, ವಿಜಯಪುರ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
August 31, 2026
2:46 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?
August 29, 2026
6:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?
August 28, 2026
2:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror