ಸುದ್ದಿಗಳು

ವೆದರ್‌ ಮಿರರ್‌ : 20 -11 -2021 | ಮುಂದುವರಿದ ವಾಯುಭಾರ ಕುಸಿತ | ಕೇರಳ ಹಾಗೂ ಕರಾವಳಿ ಭಾಗಗಳಲ್ಲಿ ಮುಂಗಾರಿನ ವಾತಾವರಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

21.11.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

Advertisement

ದಕ್ಷಿಣ ಕನ್ನಡದ ಪುತ್ತೂರು, ಬಂಟ್ವಾಳ, ಮಂಗಳೂರು, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಕಡಬ, ಬೆಳ್ತಂಗಡಿ ಭಾಗಗಳಲ್ಲಿ ಮಳೆ ಸ್ವಲ್ಪ ಕಡಿಮೆ ಇರಬಹುದು. ಕಾಸರಗೋಡು ಜಿಲ್ಲೆಯಾದ್ಯಂತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

 

Koo App

#rain #ಮಳೆ #ಬೆಳೆಪರಿಹಾರ #ಕೃಷಿ
ಮಳೆಯ ಕಾರಣದಿಂದ ಕೃಷಿ ಹಾನಿ ಸಂಭವಿಸುತ್ತಿದೆ. ಕೃಷಿಕರೊಬ್ಬರ ಅಂಗಳದಲ್ಲನ ಅಡಿಕೆ ಮಳೆಗೆ ಕೊಳೆಯುತ್ತಿರುವುದು.

The Rural Mirror (@ruralmirror) 20 Nov 2021

ಚಾಮರಾಜನಗರ (ಗುಂಡ್ಲುಪೇಟೆ ಸುತ್ತಮುತ್ತ ತುಂತುರು ಮಾತ್ರ ಇರಬಹುದು), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ(ಭಾರಿ ಮಳೆ), ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆಯೂ ಇದೆ.

ವಾಯುಭಾರ ಕುಸಿತ ....

ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಇನ್ನೂ ಮುಂದುವರಿದಿದ್ದು ಕೇರಳ ಹಾಗೂ ದಕ್ಷಿಣ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮುಂಗಾರಿನ ವಾತಾವರಣ ಸೃಷ್ಟಿಸಿದೆ.

ಆದರೆ ಈ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು ನಾಳೆಯಿಂದ ಈ ವಾತಾವರಣ ಬದಲಾಗಬಹುದು. ಆದರೂ ಈಗಿನ ಮಳೆಯ ವಾತಾವರಣವು ನವೆಂಬರ್ 23ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…

5 hours ago

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

8 hours ago

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

11 hours ago

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |

ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ  ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ವಿವಿಧ…

11 hours ago

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

1 day ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

1 day ago