21.11.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡದ ಪುತ್ತೂರು, ಬಂಟ್ವಾಳ, ಮಂಗಳೂರು, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಕಡಬ, ಬೆಳ್ತಂಗಡಿ ಭಾಗಗಳಲ್ಲಿ ಮಳೆ ಸ್ವಲ್ಪ ಕಡಿಮೆ ಇರಬಹುದು. ಕಾಸರಗೋಡು ಜಿಲ್ಲೆಯಾದ್ಯಂತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ (ಗುಂಡ್ಲುಪೇಟೆ ಸುತ್ತಮುತ್ತ ತುಂತುರು ಮಾತ್ರ ಇರಬಹುದು), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ(ಭಾರಿ ಮಳೆ), ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆಯೂ ಇದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಇನ್ನೂ ಮುಂದುವರಿದಿದ್ದು ಕೇರಳ ಹಾಗೂ ದಕ್ಷಿಣ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮುಂಗಾರಿನ ವಾತಾವರಣ ಸೃಷ್ಟಿಸಿದೆ.
ಆದರೆ ಈ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು ನಾಳೆಯಿಂದ ಈ ವಾತಾವರಣ ಬದಲಾಗಬಹುದು. ಆದರೂ ಈಗಿನ ಮಳೆಯ ವಾತಾವರಣವು ನವೆಂಬರ್ 23ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…