ವೆದರ್‌ ಮಿರರ್‌ :30-11-2021 | ಮತ್ತೆ ಮಳೆ ಸೂಚನೆ | ಅರಬೀಸಮುದ್ರದಲ್ಲಿ ವಾಯುಭಾರ ಕುಸಿತದ ಲಕ್ಷಣ | ಡಿಸೆಂಬರ್‌ ಮೊದಲ ವಾರದಲ್ಲೂ ಮಳೆ ಸಾಧ್ಯತೆ |

November 30, 2021
2:24 PM

01.12.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಹೆಚ್ಚಿನ ಅವಧಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಆಗುಂಬೆ, ಶಿೃಂಗೇರಿ, ಹೊಸನಗರ, ಸಾಗರ, ಮುಂಡುಗೋಡ, ಕೊಡಗು ಹಾಗೂ ರಾಯಚೂರು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಮೋಡದ ವಾತಾವರಣ ಇರಬಹುದು.

ವಾಯುಭಾರ ಕುಸಿತ.....

ಈಗಾಗಲೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, ಡಿಸೆಂಬರ್ 1ರ ಸಂಜೆ ಮಹಾರಾಷ್ಟ್ರದ ಮುಂಬೈ ಕರಾವಳಿ ತಲುಪಲಿದೆ. ಅಲ್ಲಿ ಪ್ರಭಲಗೊಂಡು, ಉತ್ತರ ಮಹಾರಾಷ್ಟ್ರ ಭಾರಿ ಮಳೆಯ ಮುನ್ಸೂಚನೆ ಇದೆ.

ಇಂದು ಮತ್ತು ನಾಳೆ ದಕ್ಷಿಣ ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾದಲ್ಲಿ ಅತಿ ಹೆಚ್ಚು ಮಳೆ ಬೀಳಲಿದೆ ಹಾಗೂ ತಮಿಳುನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವಿದೆ ಮತ್ತು ತಮಿಳುನಾಡು ಕರಾವಳಿ ಮತ್ತು ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಈಶಾನ್ಯ ಮಾರುತಗಳು ಅಪ್ಪಳಿಸಲಿವೆ.

ಮುಂದಿನ 4 ದಿನಗಳಲ್ಲಿ ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ದಕ್ಷಿಣ ಒಳನಾಡಿನ ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಇಂದು ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ಅವಧಿಯಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಬಹುದು. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror