Advertisement
ವೆದರ್ ಮಿರರ್

ಹೆಚ್ಚುತ್ತಿರುವ ಚಳಿ ಗಾಳಿ | ರಾಜ್ಯದಲ್ಲಿ ಎರಡು ದಿನ ವಿಪರೀತ ಚಳಿ ನಿರೀಕ್ಷೆ | ಡಿ.31 ರಿಂದ ಕರಾವಳಿ ಜಿಲ್ಲೆಗಳಲ್ಲಿ ಮೋಡ |

Share

31.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಒಣಹವೆ ಮುಂದುವರಿಯಲಿದೆ.

ಈಗಿನ ಮುನ್ಸೂಚನೆಯಂತೆ ನಾಳೆಯಿಂದ ಅಂದರೆ ಡಿಸೆಂಬರ್ 31ರಿಂದ ಜನವರಿ 3ರ ತನಕ ಕರಾವಳಿಯ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ.

ಹೆಚ್ಚಾಗಲಿದೆ ಚಳಿ |

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಚಳಿ ವಾತಾವರಣ ಮುಂದುವರೆದಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಬೆಳಗ್ಗೆ ದಟ್ಟ ಮಂಜು ಕವಿದ ವಾತಾವರಣ ನಿರ್ಮಾಣವಾಗಿದೆ.

ವಾಯುವ್ಯ ಬಯಲು ಪ್ರದೇಶಗಳಲ್ಲಿ, ವಿಶೇಷವಾಗಿ ಪಂಜಾಬ್, ಹರಿಯಾಣ ಮತ್ತು ಚಂಡೀಗಢದ ಕೆಲವು ಭಾಗಗಳಲ್ಲಿ ಇಂದಿನಿಂದ ಜನವರಿ 2 ರ ಭಾನುವಾರದವರೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮಾಹಿತಿಯನ್ನು ನೀಡಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೆರಡು ದಿನ ಚಳಿ ಹೆಚ್ಚಾಗಲಿದ್ದು, ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಮೈಸೂರು, ಉತ್ತರ ಕರ್ನಾಟಕದಲ್ಲಿ ಜನವರಿ 1 ರ ಬಳಿಕ ಕರ್ನಾಟಕದಲ್ಲಿ ಶೀತ ಗಾಳಿ ಕಡಿಮೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ಭಾರತದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್‌ನ ಇಳಿಕೆಯಿಂದಾಗಿ ಈ ಶೀತ ಪರಿಸ್ಥಿತಿಗಳು ಉಂಟಾಗುತ್ತದೆ .

ದೆಹಲಿ, ಪಂಜಾಬ್, ರಾಜಸ್ತಾನ, ಚಂಡೀಗಢ, ಹರಿಯಾಣ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತಿಸ್‌ಗಢದಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ.

ಮಾತ್ರವಲ್ಲದೆ, ಈ ರಾಜ್ಯಗಳಲ್ಲಿ ಡಿಸೆಂಬರ್ 31 ರಿಂದ ಜನವರಿ 2 ರವರೆಗೆ ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

4 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

4 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

11 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

13 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

22 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

22 hours ago