31.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಒಣಹವೆ ಮುಂದುವರಿಯಲಿದೆ.
ಈಗಿನ ಮುನ್ಸೂಚನೆಯಂತೆ ನಾಳೆಯಿಂದ ಅಂದರೆ ಡಿಸೆಂಬರ್ 31ರಿಂದ ಜನವರಿ 3ರ ತನಕ ಕರಾವಳಿಯ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಚಳಿ ವಾತಾವರಣ ಮುಂದುವರೆದಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಬೆಳಗ್ಗೆ ದಟ್ಟ ಮಂಜು ಕವಿದ ವಾತಾವರಣ ನಿರ್ಮಾಣವಾಗಿದೆ.
ವಾಯುವ್ಯ ಬಯಲು ಪ್ರದೇಶಗಳಲ್ಲಿ, ವಿಶೇಷವಾಗಿ ಪಂಜಾಬ್, ಹರಿಯಾಣ ಮತ್ತು ಚಂಡೀಗಢದ ಕೆಲವು ಭಾಗಗಳಲ್ಲಿ ಇಂದಿನಿಂದ ಜನವರಿ 2 ರ ಭಾನುವಾರದವರೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮಾಹಿತಿಯನ್ನು ನೀಡಿದೆ.
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೆರಡು ದಿನ ಚಳಿ ಹೆಚ್ಚಾಗಲಿದ್ದು, ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಮೈಸೂರು, ಉತ್ತರ ಕರ್ನಾಟಕದಲ್ಲಿ ಜನವರಿ 1 ರ ಬಳಿಕ ಕರ್ನಾಟಕದಲ್ಲಿ ಶೀತ ಗಾಳಿ ಕಡಿಮೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ಭಾರತದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್ನ ಇಳಿಕೆಯಿಂದಾಗಿ ಈ ಶೀತ ಪರಿಸ್ಥಿತಿಗಳು ಉಂಟಾಗುತ್ತದೆ .
ದೆಹಲಿ, ಪಂಜಾಬ್, ರಾಜಸ್ತಾನ, ಚಂಡೀಗಢ, ಹರಿಯಾಣ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತಿಸ್ಗಢದಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ.
ಮಾತ್ರವಲ್ಲದೆ, ಈ ರಾಜ್ಯಗಳಲ್ಲಿ ಡಿಸೆಂಬರ್ 31 ರಿಂದ ಜನವರಿ 2 ರವರೆಗೆ ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…