ವೆದರ್‌ ಮಿರರ್‌ | ಹೆಚ್ಚುತ್ತಿರುವ ಹವಾಮಾನ ವೈಪರೀತ್ಯ ಸಮಸ್ಯೆ | ಏರುತ್ತಿರುವ ಉಷ್ಣತೆ | ಇಳಿಯುತ್ತಿರುವ ತೇವಾಂಶ |

March 4, 2022
9:33 PM

ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯ ಬಹಳವಾಗಿ ಕಾಡುತ್ತಿರುವ ವಿಷಯ. ಏಕೆ ಹೀಗೆ ಎಂದು ಅಧ್ಯಯನಗಳು ನಡೆದರೆ ಭೂಮಿಯ ಉಷ್ಣತೆಯಲ್ಲಿ  ಏರಿಕೆ ಮೊದಲಾಗಿ ಕಂಡುಬರುತ್ತಿದೆ. ಈಚೆಗೆ ನಡೆದ ಅಂತರಾಷ್ಟ್ರೀಯ ಹವಾಮಾನ ಸಮ್ಮೇಳನದಲ್ಲೂ ಈ ಬಗ್ಗೆ ಚರ್ಚೆಯಾಗಿತ್ತು. ಮುಂದಿನ ದಿನಗಳಲ್ಲಿ  ಇಡೀ ಪ್ರಪಂಚದಲ್ಲಿ ಈಗಿನ ಉಷ್ಣತೆಗಿಂತ ಎರಡು ಡಿಗ್ರಿ ಕಡಿಮೆ ಮಾಡಲು ಶಿಫಾರಸು ಮಾಡಲಾಗಿತ್ತು. ಇದಕ್ಕಾಗಿ ಅರಣ್ಯ ಸಂರಕ್ಷಣೆ, ವಾಯು ಮಾಲಿನ್ಯ ಕಡಿಮೆ ಮಾಡುವುದು  ಸೇರಿದಂತೆ ಸೋಲಾರ್‌ ಬಳಕೆಗೆ ಆದ್ಯತೆ ನೀಡಲೂ  ಶಿಫಾರಸು ಮಾಡಲಾಗಿತ್ತು.

Advertisement
Advertisement
Advertisement
Advertisement

ಈಗಾಗಲೇ ಭಾರತಕ್ಕೆ ಈ ವರ್ಷದ ಪ್ರಥಮ ವಾಯುಭಾರ ಕುಸಿತವು ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದು ಇನ್ನೆರಡು ದಿನಗಳಲ್ಲಿ ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆ ಇದೆ. ಈಗಿನ ಮುನ್ಸೂಚೆನೆಯಂತೆ ಮಾರ್ಚ್ 7 ರಂದು ದಕ್ಷಿಣ ಕರ್ನಾಟಕದ ಒಳನಾಡಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಇದರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ತೇವಾಂಶ ಏರಿಕೆಯಾಗಿ ಮಾರ್ಚ್ 8 ರಿಂದ ಗುಡುಗು ಸಿಡಿಲು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಾರ್ಚ್ 13 ರ ತನಕವೂ ಕರಾವಳಿ ಹಾಗೂ ಕೊಡಗಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement

ಈ ನಡುವೆ ಶಿವರಾತ್ರಿ ಮುಗಿಯುತ್ತಿದ್ದಂತೆ ಸೆಖೆ ಆರಂಭವಾಗಬೇಕಿದ್ದ ಕಾಲದಲ್ಲಿ ಉಷ್ಣಾಂಶ ಮಾತ್ರ ಏರಿಕೆಯಾಗಿ ಶುಷ್ಕ ಹವೆ ಪ್ರಾರಂಭವಾಗಿರುವುದು ಮಳೆ ಬೀಳುವ ಸಾಧ್ಯತೆಯನ್ನು ದೂರ ಮಾಡಬಹುದೆ ? ಎಂಬ ಆತಂಕ ಮನೆಮಾಡಿದೆ. ಈ ವಾಯುಭಾರ ಕುಸಿತವು ಉತ್ತರ ಭಾರತದ ಕಡೆಯಿಂದ ಶುಷ್ಕ ಹವೆಯನ್ನು ಸೆಳೆಯುತ್ತಿದೆ. ಒಂದು ವಿಶ್ಲೇಷಣೆಯಂತೆ ವಾಯುಭಾರ ಕುಸಿತವು ತಮಿಳುನಾಡು ಪ್ರವೇಶಿಸಿದಂತೆ ವಾತಾವರಣದಲ್ಲಿ ತೇವಾಂಶ ಏರಿಕೆಯಾಗಬಹುದು.

Advertisement

ಕರಾವಳಿ ಭಾಗದಲ್ಲಿ ಈಗ ವಾತಾವರಣದ ಉಷ್ಣತೆ 38 ಡಿಗ್ರಿಯಿಂದ 41 ಡಿಗ್ರಿಯವರೆಗೂ ಏರಿಕೆಯಾಗುತ್ತದೆ, ಇಳಿಕೆಯಾಗುತ್ತದೆ. ಈ ನಡುವೆ ವಾತಾವರಣದ ತೇವಾಂಶವೂ ಕಡಿಮೆಯಾಗುತ್ತಿರುವುದು  ಗಮನಾರ್ಹ ಅಂಶವಾಗಿದೆ. ಕರಾವಳಿ ಪ್ರದೇಶದಲ್ಲೂ ಈಗ ಶೇಕಡಾ 12 – 15 ರಷ್ಟು ವಾತಾವರಣದ ತೇವಾಂಶ ಕಂಡುಬರುತ್ತಿದೆ. ಮಲೆನಾಡು ಪ್ರದೇಶದಲ್ಲೂ ತೇವಾಂಶ ಕುಸಿತವಾಗುವ ಕಾರಣದಿಂದ ಭೂಮಿಯ ಉಷ್ಣತೆ ಹೆಚ್ಚಾಗುತ್ತಿದೆ,  ಹೀಗಾಗಿ ಈಚೆಗೆ ಕೆಲವು ವರ್ಷಗಳಿಂದ ಕೃಷಿಗೆ ವಿಪರೀತವಾದ ಬಿಸಿಲಿನ ಸಮಸ್ಯೆ ಕಾಡುತ್ತಿರುವುದು  ಕಂಡುಬರುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror