ವೆದರ್ ಮಿರರ್

ವೆದರ್‌ ಮಿರರ್‌ | ಹೆಚ್ಚುತ್ತಿರುವ ಹವಾಮಾನ ವೈಪರೀತ್ಯ ಸಮಸ್ಯೆ | ಏರುತ್ತಿರುವ ಉಷ್ಣತೆ | ಇಳಿಯುತ್ತಿರುವ ತೇವಾಂಶ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯ ಬಹಳವಾಗಿ ಕಾಡುತ್ತಿರುವ ವಿಷಯ. ಏಕೆ ಹೀಗೆ ಎಂದು ಅಧ್ಯಯನಗಳು ನಡೆದರೆ ಭೂಮಿಯ ಉಷ್ಣತೆಯಲ್ಲಿ  ಏರಿಕೆ ಮೊದಲಾಗಿ ಕಂಡುಬರುತ್ತಿದೆ. ಈಚೆಗೆ ನಡೆದ ಅಂತರಾಷ್ಟ್ರೀಯ ಹವಾಮಾನ ಸಮ್ಮೇಳನದಲ್ಲೂ ಈ ಬಗ್ಗೆ ಚರ್ಚೆಯಾಗಿತ್ತು. ಮುಂದಿನ ದಿನಗಳಲ್ಲಿ  ಇಡೀ ಪ್ರಪಂಚದಲ್ಲಿ ಈಗಿನ ಉಷ್ಣತೆಗಿಂತ ಎರಡು ಡಿಗ್ರಿ ಕಡಿಮೆ ಮಾಡಲು ಶಿಫಾರಸು ಮಾಡಲಾಗಿತ್ತು. ಇದಕ್ಕಾಗಿ ಅರಣ್ಯ ಸಂರಕ್ಷಣೆ, ವಾಯು ಮಾಲಿನ್ಯ ಕಡಿಮೆ ಮಾಡುವುದು  ಸೇರಿದಂತೆ ಸೋಲಾರ್‌ ಬಳಕೆಗೆ ಆದ್ಯತೆ ನೀಡಲೂ  ಶಿಫಾರಸು ಮಾಡಲಾಗಿತ್ತು.

Advertisement

ಈಗಾಗಲೇ ಭಾರತಕ್ಕೆ ಈ ವರ್ಷದ ಪ್ರಥಮ ವಾಯುಭಾರ ಕುಸಿತವು ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದು ಇನ್ನೆರಡು ದಿನಗಳಲ್ಲಿ ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆ ಇದೆ. ಈಗಿನ ಮುನ್ಸೂಚೆನೆಯಂತೆ ಮಾರ್ಚ್ 7 ರಂದು ದಕ್ಷಿಣ ಕರ್ನಾಟಕದ ಒಳನಾಡಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಇದರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ತೇವಾಂಶ ಏರಿಕೆಯಾಗಿ ಮಾರ್ಚ್ 8 ರಿಂದ ಗುಡುಗು ಸಿಡಿಲು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಾರ್ಚ್ 13 ರ ತನಕವೂ ಕರಾವಳಿ ಹಾಗೂ ಕೊಡಗಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಈ ನಡುವೆ ಶಿವರಾತ್ರಿ ಮುಗಿಯುತ್ತಿದ್ದಂತೆ ಸೆಖೆ ಆರಂಭವಾಗಬೇಕಿದ್ದ ಕಾಲದಲ್ಲಿ ಉಷ್ಣಾಂಶ ಮಾತ್ರ ಏರಿಕೆಯಾಗಿ ಶುಷ್ಕ ಹವೆ ಪ್ರಾರಂಭವಾಗಿರುವುದು ಮಳೆ ಬೀಳುವ ಸಾಧ್ಯತೆಯನ್ನು ದೂರ ಮಾಡಬಹುದೆ ? ಎಂಬ ಆತಂಕ ಮನೆಮಾಡಿದೆ. ಈ ವಾಯುಭಾರ ಕುಸಿತವು ಉತ್ತರ ಭಾರತದ ಕಡೆಯಿಂದ ಶುಷ್ಕ ಹವೆಯನ್ನು ಸೆಳೆಯುತ್ತಿದೆ. ಒಂದು ವಿಶ್ಲೇಷಣೆಯಂತೆ ವಾಯುಭಾರ ಕುಸಿತವು ತಮಿಳುನಾಡು ಪ್ರವೇಶಿಸಿದಂತೆ ವಾತಾವರಣದಲ್ಲಿ ತೇವಾಂಶ ಏರಿಕೆಯಾಗಬಹುದು.

ಕರಾವಳಿ ಭಾಗದಲ್ಲಿ ಈಗ ವಾತಾವರಣದ ಉಷ್ಣತೆ 38 ಡಿಗ್ರಿಯಿಂದ 41 ಡಿಗ್ರಿಯವರೆಗೂ ಏರಿಕೆಯಾಗುತ್ತದೆ, ಇಳಿಕೆಯಾಗುತ್ತದೆ. ಈ ನಡುವೆ ವಾತಾವರಣದ ತೇವಾಂಶವೂ ಕಡಿಮೆಯಾಗುತ್ತಿರುವುದು  ಗಮನಾರ್ಹ ಅಂಶವಾಗಿದೆ. ಕರಾವಳಿ ಪ್ರದೇಶದಲ್ಲೂ ಈಗ ಶೇಕಡಾ 12 – 15 ರಷ್ಟು ವಾತಾವರಣದ ತೇವಾಂಶ ಕಂಡುಬರುತ್ತಿದೆ. ಮಲೆನಾಡು ಪ್ರದೇಶದಲ್ಲೂ ತೇವಾಂಶ ಕುಸಿತವಾಗುವ ಕಾರಣದಿಂದ ಭೂಮಿಯ ಉಷ್ಣತೆ ಹೆಚ್ಚಾಗುತ್ತಿದೆ,  ಹೀಗಾಗಿ ಈಚೆಗೆ ಕೆಲವು ವರ್ಷಗಳಿಂದ ಕೃಷಿಗೆ ವಿಪರೀತವಾದ ಬಿಸಿಲಿನ ಸಮಸ್ಯೆ ಕಾಡುತ್ತಿರುವುದು  ಕಂಡುಬರುತ್ತಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |

ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.

8 hours ago

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ

ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…

11 hours ago

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…

14 hours ago

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…

15 hours ago

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

15 hours ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

15 hours ago