Advertisement
ವೆದರ್ ಮಿರರ್

ವೆದರ್‌ ಮಿರರ್‌ | ಹೆಚ್ಚುತ್ತಿರುವ ಹವಾಮಾನ ವೈಪರೀತ್ಯ ಸಮಸ್ಯೆ | ಏರುತ್ತಿರುವ ಉಷ್ಣತೆ | ಇಳಿಯುತ್ತಿರುವ ತೇವಾಂಶ |

Share

ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯ ಬಹಳವಾಗಿ ಕಾಡುತ್ತಿರುವ ವಿಷಯ. ಏಕೆ ಹೀಗೆ ಎಂದು ಅಧ್ಯಯನಗಳು ನಡೆದರೆ ಭೂಮಿಯ ಉಷ್ಣತೆಯಲ್ಲಿ  ಏರಿಕೆ ಮೊದಲಾಗಿ ಕಂಡುಬರುತ್ತಿದೆ. ಈಚೆಗೆ ನಡೆದ ಅಂತರಾಷ್ಟ್ರೀಯ ಹವಾಮಾನ ಸಮ್ಮೇಳನದಲ್ಲೂ ಈ ಬಗ್ಗೆ ಚರ್ಚೆಯಾಗಿತ್ತು. ಮುಂದಿನ ದಿನಗಳಲ್ಲಿ  ಇಡೀ ಪ್ರಪಂಚದಲ್ಲಿ ಈಗಿನ ಉಷ್ಣತೆಗಿಂತ ಎರಡು ಡಿಗ್ರಿ ಕಡಿಮೆ ಮಾಡಲು ಶಿಫಾರಸು ಮಾಡಲಾಗಿತ್ತು. ಇದಕ್ಕಾಗಿ ಅರಣ್ಯ ಸಂರಕ್ಷಣೆ, ವಾಯು ಮಾಲಿನ್ಯ ಕಡಿಮೆ ಮಾಡುವುದು  ಸೇರಿದಂತೆ ಸೋಲಾರ್‌ ಬಳಕೆಗೆ ಆದ್ಯತೆ ನೀಡಲೂ  ಶಿಫಾರಸು ಮಾಡಲಾಗಿತ್ತು.

ಈಗಾಗಲೇ ಭಾರತಕ್ಕೆ ಈ ವರ್ಷದ ಪ್ರಥಮ ವಾಯುಭಾರ ಕುಸಿತವು ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದು ಇನ್ನೆರಡು ದಿನಗಳಲ್ಲಿ ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆ ಇದೆ. ಈಗಿನ ಮುನ್ಸೂಚೆನೆಯಂತೆ ಮಾರ್ಚ್ 7 ರಂದು ದಕ್ಷಿಣ ಕರ್ನಾಟಕದ ಒಳನಾಡಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಇದರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ತೇವಾಂಶ ಏರಿಕೆಯಾಗಿ ಮಾರ್ಚ್ 8 ರಿಂದ ಗುಡುಗು ಸಿಡಿಲು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಾರ್ಚ್ 13 ರ ತನಕವೂ ಕರಾವಳಿ ಹಾಗೂ ಕೊಡಗಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಈ ನಡುವೆ ಶಿವರಾತ್ರಿ ಮುಗಿಯುತ್ತಿದ್ದಂತೆ ಸೆಖೆ ಆರಂಭವಾಗಬೇಕಿದ್ದ ಕಾಲದಲ್ಲಿ ಉಷ್ಣಾಂಶ ಮಾತ್ರ ಏರಿಕೆಯಾಗಿ ಶುಷ್ಕ ಹವೆ ಪ್ರಾರಂಭವಾಗಿರುವುದು ಮಳೆ ಬೀಳುವ ಸಾಧ್ಯತೆಯನ್ನು ದೂರ ಮಾಡಬಹುದೆ ? ಎಂಬ ಆತಂಕ ಮನೆಮಾಡಿದೆ. ಈ ವಾಯುಭಾರ ಕುಸಿತವು ಉತ್ತರ ಭಾರತದ ಕಡೆಯಿಂದ ಶುಷ್ಕ ಹವೆಯನ್ನು ಸೆಳೆಯುತ್ತಿದೆ. ಒಂದು ವಿಶ್ಲೇಷಣೆಯಂತೆ ವಾಯುಭಾರ ಕುಸಿತವು ತಮಿಳುನಾಡು ಪ್ರವೇಶಿಸಿದಂತೆ ವಾತಾವರಣದಲ್ಲಿ ತೇವಾಂಶ ಏರಿಕೆಯಾಗಬಹುದು.

ಕರಾವಳಿ ಭಾಗದಲ್ಲಿ ಈಗ ವಾತಾವರಣದ ಉಷ್ಣತೆ 38 ಡಿಗ್ರಿಯಿಂದ 41 ಡಿಗ್ರಿಯವರೆಗೂ ಏರಿಕೆಯಾಗುತ್ತದೆ, ಇಳಿಕೆಯಾಗುತ್ತದೆ. ಈ ನಡುವೆ ವಾತಾವರಣದ ತೇವಾಂಶವೂ ಕಡಿಮೆಯಾಗುತ್ತಿರುವುದು  ಗಮನಾರ್ಹ ಅಂಶವಾಗಿದೆ. ಕರಾವಳಿ ಪ್ರದೇಶದಲ್ಲೂ ಈಗ ಶೇಕಡಾ 12 – 15 ರಷ್ಟು ವಾತಾವರಣದ ತೇವಾಂಶ ಕಂಡುಬರುತ್ತಿದೆ. ಮಲೆನಾಡು ಪ್ರದೇಶದಲ್ಲೂ ತೇವಾಂಶ ಕುಸಿತವಾಗುವ ಕಾರಣದಿಂದ ಭೂಮಿಯ ಉಷ್ಣತೆ ಹೆಚ್ಚಾಗುತ್ತಿದೆ,  ಹೀಗಾಗಿ ಈಚೆಗೆ ಕೆಲವು ವರ್ಷಗಳಿಂದ ಕೃಷಿಗೆ ವಿಪರೀತವಾದ ಬಿಸಿಲಿನ ಸಮಸ್ಯೆ ಕಾಡುತ್ತಿರುವುದು  ಕಂಡುಬರುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago